ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಶುಂಠಿ ಬೆಳೆ ನೀರಿಲ್ಲದೆ ಒಣಗಿತ್ತು. ಸಾಲದ ಹೊರೆ ಜಾಸ್ತಿಯಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಜೊತೆಗೆ, ಸಾಲ ತೀರಿಸುವಂತೆ ಬ್ಯಾಂಕ್ನಿಂದ ನೋಟಿಸ್ ಬಂದ ಕಾರಣ ಭಯದಿಂದ ಎರಡು ದಿನಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಪತ್ನಿ ಸುವರ್ಣಾ, ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.