<p><strong>ಬೆಂಗಳೂರು:</strong> ಗಿರೀಶ್ ಕಾಸರವಳ್ಳಿ, ಸಾರಾ ಅಬೂಬಕರ್, ಬಿ.ಕೆ.ಸುಮಿತ್ರ ಹಾಗೂ ಚಂದ್ರಕಾಂತ ಪೋಕಳೆ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.</p>.<p>ಪ್ರತಿಷ್ಠಾನವು ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ತಲಾ ಒಬ್ಬರಿಗೆ ಪ್ರತಿವರ್ಷವೂ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರುತ್ತದೆ.</p>.<p>ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಕಾಸರವಳ್ಳಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾರಾ ಅವರಿಗೆ 2020ನೇ ಸಾಲಿನ ಪ್ರಶಸ್ತಿ ದೊರೆತಿದೆ.</p>.<p>ಹಿನ್ನೆಲೆ ಗಾಯಕಿಯಾಗಿ ಹೆಸರು ಗಳಿಸಿರುವ ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಬಿ.ಕೆ.ಸುಮಿತ್ರ ಮತ್ತು ಮರಾಠಿಯಿಂದ ಕನ್ನಡಕ್ಕೆ 40ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿರುವ ಚಂದ್ರಕಾಂತ ಅವರಿಗೆ 2021ನೇ ಸಾಲಿನ ಪ್ರಶಸ್ತಿ ಒಲಿದಿದೆ.</p>.<p>ಇದೇ 30ರಂದು ನಗರದಲ್ಲಿಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಿರೀಶ್ ಕಾಸರವಳ್ಳಿ, ಸಾರಾ ಅಬೂಬಕರ್, ಬಿ.ಕೆ.ಸುಮಿತ್ರ ಹಾಗೂ ಚಂದ್ರಕಾಂತ ಪೋಕಳೆ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.</p>.<p>ಪ್ರತಿಷ್ಠಾನವು ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ತಲಾ ಒಬ್ಬರಿಗೆ ಪ್ರತಿವರ್ಷವೂ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರುತ್ತದೆ.</p>.<p>ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಕಾಸರವಳ್ಳಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾರಾ ಅವರಿಗೆ 2020ನೇ ಸಾಲಿನ ಪ್ರಶಸ್ತಿ ದೊರೆತಿದೆ.</p>.<p>ಹಿನ್ನೆಲೆ ಗಾಯಕಿಯಾಗಿ ಹೆಸರು ಗಳಿಸಿರುವ ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಬಿ.ಕೆ.ಸುಮಿತ್ರ ಮತ್ತು ಮರಾಠಿಯಿಂದ ಕನ್ನಡಕ್ಕೆ 40ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿರುವ ಚಂದ್ರಕಾಂತ ಅವರಿಗೆ 2021ನೇ ಸಾಲಿನ ಪ್ರಶಸ್ತಿ ಒಲಿದಿದೆ.</p>.<p>ಇದೇ 30ರಂದು ನಗರದಲ್ಲಿಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>