ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದು ಬಿದ್ದ ಬರಗೂರು ರಾಮಚಂದ್ರಪ್ಪ

Last Updated 29 ಜನವರಿ 2023, 10:56 IST
ಅಕ್ಷರ ಗಾತ್ರ

ದಾವಣಗೆರೆ:ಹರಿಹರದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಭಾನುವಾರ ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಕವಿಗೋಷ್ಟಿ ಉದ್ಘಾಟಿಸಿ, ನಗರದ ಪಿಡಬ್ಲುಡಿ ಪ್ರವಾಸಿ ಮಂದಿರಕ್ಕೆ ಮರಳಿದ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಕೊಠಡಿಯಲ್ಲಿ ಕುಸಿದು ಬಿದ್ದರು.


ಸ್ಥಳದಲ್ಲಿದ್ದ ಸಂಘಟಕರು ತಕ್ಷಣ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಈಗ ಆರೋಗ್ಯ ಸುಧಾರಿಸುತ್ತಿದೆ.

'ನನಗೆ ಅಧಿಕ ರಕ್ತದೊತ್ತಡ ಮತ್ತ ಸಕ್ಕರೆ ಪರೀಕ್ಷೆ ನಡೆಸಿದರು. ಎಲ್ಲ ನಾರ್ಮಲ್ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಹಿಂದೆ ಈ ರೀತಿ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ತಲೆತಿರುಗಿದಂತಾಗಿ ಬಿದ್ದೆ' ಎಂದು ಬರಗೂರು ರಾಮಚಂದ್ರಪ್ಪ ಅವರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.

ಬೆಂಗಳೂರಿಗೆ ಹೋದ ಮೇಲೆ ಅಲ್ಲಿ ಆರೋಗ್ಯ ತಪಾಸಣೆ ಮಾಡಿಸುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT