ದಾವಣಗೆರೆ:ಹರಿಹರದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಭಾನುವಾರ ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಕವಿಗೋಷ್ಟಿ ಉದ್ಘಾಟಿಸಿ, ನಗರದ ಪಿಡಬ್ಲುಡಿ ಪ್ರವಾಸಿ ಮಂದಿರಕ್ಕೆ ಮರಳಿದ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಕೊಠಡಿಯಲ್ಲಿ ಕುಸಿದು ಬಿದ್ದರು.
ಸ್ಥಳದಲ್ಲಿದ್ದ ಸಂಘಟಕರು ತಕ್ಷಣ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಈಗ ಆರೋಗ್ಯ ಸುಧಾರಿಸುತ್ತಿದೆ.
'ನನಗೆ ಅಧಿಕ ರಕ್ತದೊತ್ತಡ ಮತ್ತ ಸಕ್ಕರೆ ಪರೀಕ್ಷೆ ನಡೆಸಿದರು. ಎಲ್ಲ ನಾರ್ಮಲ್ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಹಿಂದೆ ಈ ರೀತಿ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ತಲೆತಿರುಗಿದಂತಾಗಿ ಬಿದ್ದೆ' ಎಂದು ಬರಗೂರು ರಾಮಚಂದ್ರಪ್ಪ ಅವರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.
ಬೆಂಗಳೂರಿಗೆ ಹೋದ ಮೇಲೆ ಅಲ್ಲಿ ಆರೋಗ್ಯ ತಪಾಸಣೆ ಮಾಡಿಸುವುದಾಗಿ ತಿಳಿಸಿದರು.