<p><strong>ಬೆಂಗಳೂರು:</strong> ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯಕ್ರಮವನ್ನೇ ಸಿಬಿಎಸ್ಇ 10 ಮತ್ತು 9ನೇ ತರಗತಿಗಳಿಗೆ ಕನ್ನಡ ವಿಷಯದ ಪಠ್ಯವಾಗಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪಠ್ಯ ಪರಿಷ್ಕರಣೆಯು ವಿದೇಶಿ ತಳಿಯಾದ ಆರ್ಎಸ್ಎಸ್ ಮೆಚ್ಚಿಸುವ ಸಲುವಾಗಿಯೇ? ಎಂದು ಪ್ರಶ್ನಿಸಿದೆ.</p>.<p>'ಸಿಬಿಎಸ್ಇಗೆ ಪಠ್ಯ, ರಾಜ್ಯಕ್ಕೆ ಅಪಥ್ಯ!' ತಲೆಬರಹದ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಅಳವಡಿಸಿಕೊಂಡಿದೆ. ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ಪರಿಷ್ಕರಣೆಯ ಹಠವೇಕೆ? ಎಂದಿದೆ.</p>.<p>'ಸುಳ್ಳುಗಳಿಂದ ಸಮರ್ಥಿಸುತ್ತಾ, ವಿವಾದ ಸೃಷ್ಟಿಸುತ್ತಾ ಪಠ್ಯಗಳಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವುದೇಕೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನು ಸಿಬಿಎಸ್ಇನಲ್ಲಿ ಅಳವಡಿಸಿಕೊಂಡಿರುವಾಗ ಇದೇ ಪಠ್ಯದಲ್ಲಿನ ಹಲವು ಅಧ್ಯಾಯನಗಳನ್ನು ರಾಜ್ಯ ಸರ್ಕಾರ ನೇಮಿಸಿದ ಸಮಿತಿಯು ಕೈಬಿಡಲು ಶಿಫಾರಸು ಮಾಡಿರುವುದು ಶೈಕ್ಷಣಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯಕ್ರಮವನ್ನೇ ಸಿಬಿಎಸ್ಇ 10 ಮತ್ತು 9ನೇ ತರಗತಿಗಳಿಗೆ ಕನ್ನಡ ವಿಷಯದ ಪಠ್ಯವಾಗಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪಠ್ಯ ಪರಿಷ್ಕರಣೆಯು ವಿದೇಶಿ ತಳಿಯಾದ ಆರ್ಎಸ್ಎಸ್ ಮೆಚ್ಚಿಸುವ ಸಲುವಾಗಿಯೇ? ಎಂದು ಪ್ರಶ್ನಿಸಿದೆ.</p>.<p>'ಸಿಬಿಎಸ್ಇಗೆ ಪಠ್ಯ, ರಾಜ್ಯಕ್ಕೆ ಅಪಥ್ಯ!' ತಲೆಬರಹದ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಅಳವಡಿಸಿಕೊಂಡಿದೆ. ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ಪರಿಷ್ಕರಣೆಯ ಹಠವೇಕೆ? ಎಂದಿದೆ.</p>.<p>'ಸುಳ್ಳುಗಳಿಂದ ಸಮರ್ಥಿಸುತ್ತಾ, ವಿವಾದ ಸೃಷ್ಟಿಸುತ್ತಾ ಪಠ್ಯಗಳಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವುದೇಕೆ?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p>ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನು ಸಿಬಿಎಸ್ಇನಲ್ಲಿ ಅಳವಡಿಸಿಕೊಂಡಿರುವಾಗ ಇದೇ ಪಠ್ಯದಲ್ಲಿನ ಹಲವು ಅಧ್ಯಾಯನಗಳನ್ನು ರಾಜ್ಯ ಸರ್ಕಾರ ನೇಮಿಸಿದ ಸಮಿತಿಯು ಕೈಬಿಡಲು ಶಿಫಾರಸು ಮಾಡಿರುವುದು ಶೈಕ್ಷಣಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>