ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸನಗೌಡ ಪಾಟೀಲ ಯತ್ನಾಳ ಆರೋಪ ನ್ಯಾಯಯುತ: ಎಚ್‌. ವಿಶ್ವನಾಥ್

Last Updated 24 ಫೆಬ್ರುವರಿ 2021, 21:57 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಸಂವಿಧಾನದ ಚೌಕಟ್ಟಿನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿದ್ದಾರೆ. ಅವರ ಆರೋಪದಲ್ಲಿ ನ್ಯಾಯವಿದೆ’ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಪಕ್ಷ, ಸರ್ಕಾರದ ವಿರುದ್ಧ ಯತ್ನಾಳ ಹೇಳಿಕೆ ನೀಡಿಲ್ಲ. ಜನವಿರೋಧಿ ಭಾಷಣಗಳನ್ನೂ‌ ಮಾಡಿಲ್ಲ. ಸರ್ಕಾರದ ರೀತಿನೀತಿಗಳ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ’ ಎಂದು ಸಮರ್ಥಿಸಿದರು.

‘ಮಂತ್ರಿಗಳ ನಿರಾಸಕ್ತಿ, ಅವರ ನಡವಳಿಕೆ ಬಗ್ಗೆಯೂ ಯತ್ನಾಳ ಹೇಳಿದ್ದಾರೆ. ವಿರೋಧ ಪಕ್ಷಗಳು ಸುಮ್ಮನಾದರೆ ಇನ್ನೇನು ಮಾಡಬೇಕು’ ಎಂದೂ ಪ್ರಶ್ನಿಸಿದರು.

ಸರ್ಕಾರ ವಿಫಲ: ‘ರಾಜ್ಯದಲ್ಲಿ ವಿವಿಧ ಸಮುದಾಯಗಳ ಮೀಸಲಾತಿ ಚಳುವಳಿ, ಹೋರಾಟ ಹೆಚ್ಚುತ್ತಿದೆ. ಮೇಲ್ವರ್ಗದಿಂದ ಹಿಡಿದು ಎಲ್ಲರೂ ಬೀದಿಗಿಳಿದಿದ್ದಾರೆ. ಮೆರವಣಿಗೆ, ಸತ್ಯಾಗ್ರಹ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಯಾವ ವಿಚಾರದಲ್ಲೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ವಿಷಯ ನಿಭಾಯಿಸುವಲ್ಲಿ ಸರ್ಕಾರ ವಿಫಲ ವಾಗಿದೆ’ ಎಂದು ಟೀಕಿಸಿದರು.

‘ಮೀಸಲಾತಿ ಕೇಳಲು ಜನತಂತ್ರ ವ್ಯವಸ್ಥೆಯಲ್ಲಿ ಅವಕಾಶವಿದೆ. ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ನೀಡಬೇಕು. ಕೇವಲ ಮನವಿ ಸ್ವೀಕರಿಸಿದರೆ ಎಲ್ಲವೂ‌ ಮುಗಿಯುವುದಿಲ್ಲ’ ಎಂದರು.

‘ಈಗಲೇ ಮೀಸಲಾತಿ ಘೋಷಿಸು ವಂತೆ ಪಂಚಮಸಾಲಿ ಸ್ವಾಮೀಜಿಗಳು ಪಟ್ಟು ಹಿಡಿದಿದ್ದಾರೆ. ಕುರುಬ ಸಮುದಾಯ ಕೂಡ ಮೀಸಲಾತಿ ಕೇಳುತ್ತಿದೆ. ಕುಲಶಾಸ್ತ್ರ ಅಧ್ಯಯನ ಆಗಬೇಕಿದೆ. ಕೇಳಿದ ಕೂಡಲೇ ಕೊಡಲು ಬರುವುದಿಲ್ಲ. ಆದರೆ, ಸರ್ಕಾರ ನಮಗೆ ಸಂಬಂಧವೇ ಇಲ್ಲ ಎಂಬಂತೆ ಸುಮ್ಮನಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT