ಬಿಜೆಪಿ ಹೈಕಮಾಂಡ್ ಯತ್ನಾಳಗೆ ಮಾಹಿತಿ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಆಗಿದ್ರೆ ಕಾಂಗ್ರೆಸ್ನವರುಕತ್ತೆ ಕಾಯ್ತ ಇದ್ದಾರಾ?. ಭ್ರಷ್ಟರ ಜೊತೆ ವಿರೋಧ ಪಕ್ಷಗಳು ಕೈ ಜೋಡಿಸಿವೆ. ಶೋಭಾ ಡೆವಲಪರ್ಸ್ನಲ್ಲಿ ಯಾರು ಪಾಲುದಾರರು ಎಂಬುದನ್ನು ಮಾಧ್ಯಮಗಳು ತನಿಖೆ ಮಾಡಬೇಕು. ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ. ಬಿ ಎಸ್ ಯಡಿಯೂರಪ್ಪ ಜೊತೆ ಎಲ್ಲರೂ ಶಾಮೀಲಾಗಿದ್ದಾರೆ. ಅವರಿಗೂ ಭ್ರಷ್ಟಾಚಾರದಲ್ಲಿ ಪಾಲಿದೆ. ಈಗಾಗಿ ಅವರು ಯಾರು ಯಡಿಯೂರಪ್ಪ ವಿರುದ್ದ ಮಾತಾನಾಡುತ್ತಿಲ್ಲ. ಅವರಿಗೂ ಯಡಿಯೂರಪ್ಪ ಮುಂದುವರಿಯಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.