ದೇಶದ್ರೋಹಿಗಳು: ಪಾಕಿಸ್ತಾನ ಪರ ಘೋಷಣೆ ಪ್ರಕರಣ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, 'ಇದು ದೊಡ್ಡ ದುರಂತ. ಕಿಡಿಗೇಡಿಗಳು ಮಾಡುವ ಕೃತ್ಯದಿಂದ ಬೇಸರವಾಗಿದೆ. ಭಾರತ ಜಾತ್ಯತೀತ ರಾಷ್ಟ್ರ ನಾವು ಯಾವುದೇ ಸಮಾಜವನ್ನು ದ್ವೇಷ ಮಾಡಬಾರದು. ಒಬ್ಬರು ಇಬ್ಬರು ಮಾಡುವ ಕೆಲಸಕ್ಕೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ. ಆದರೆ, ಕಿಡಿಗೇಡಿಗಳಿಗೆ ಆ ಸಮುದಾಯದ ಮುಖಂಡರು ಬುದ್ಧಿ ಹೇಳಬೇಕು. ಕಠಿಣ ಶಿಕ್ಷೆ ವಿಧಿಸಬೇಕು' ಎಂದರು.