ಮಸ್ಕಿ (ರಾಯಚೂರು): ಬಿಜೆಪಿಯಿಂದ ಕಾಂಗ್ರೆಸ್ನತ್ತ ಮುಖ ಮಾಡಿರುವ ಬಸನಗೌಡ ತುರ್ವಿಹಾಳ ಅವರು ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 213 ಮತಗಳ ಅಂತರದಿಂದ ಸೋತಿದ್ದ ಅವರು, ಮುಂಬರುವ ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೈ ತಪ್ಪುತ್ತದೆ ಎನ್ನುವ ಸುಳಿವಿನಿಂದ ಪಕ್ಷ ಬಿಡಲು ಸಜ್ಜಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಅಧಿಕೃಕವಾಗಿ ಕಾಂಗ್ರೆಸ್ ಸೇರಲಿದ್ದು, ಬೆಂಬಲಿಗರು 50 ಕ್ಕೂ ಹೆಚ್ಚು ವಾಹನಗಳಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ತೆರಳಿದ್ದಾರೆ.