‘ಸರ್ಕಾರಕ್ಕೆ ಹಲವು ಬಾರಿ ಗಡುವು ನೀಡಿದ್ದರೂ ಬೇಡಿಕೆಗೆ ಸ್ಪಂದಿಸಿಲ್ಲ. ನುಡಿದಂತೆಯೂ ನಡೆಯುತ್ತಿಲ್ಲ. ಒಂದು ವರ್ಷ ಮೂರು ತಿಂಗಳಾದರೂ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದುಕೊಂಡಿಲ್ಲ. ಮುಖ್ಯಮಂತ್ರಿ ಅವರು ತಮ್ಮ ಅಧಿಕಾರ ಬಳಸಿ ತಕ್ಷಣವೇ ವರದಿ ಪಡೆದುಕೊಳ್ಳಬಹುದು. ಆದರೆ, ಅವರು ಮೌನವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಅವರಿಗೆ ಸಮಾಜದ ಋಣಭಾರ ಇದೆ ಎನ್ನುವುದನ್ನು ಅರಿತುಕೊಳ್ಳಬೇಕು’ ಎಂದು ತಿಳಿಸಿದರು.