ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದಾಯ ಪರ ಧ್ವನಿ ಎತ್ತಿದ್ದಕ್ಕೆ ದುರುದ್ದೇಶದಿಂದ ಯತ್ನಾಳ್‌ಗೆ ನೋಟಿಸ್‌: ಶ್ರೀ

Last Updated 12 ಫೆಬ್ರುವರಿ 2021, 17:11 IST
ಅಕ್ಷರ ಗಾತ್ರ

ತುಮಕೂರು: ‘ನಮಗೆ ಗೊತ್ತಿದ್ದಂತೆ ಪಕ್ಷ ವಿರೋಧಿ ಚಟುವಟಿಕೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಡಿಲ್ಲ. ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟಕ್ಕೆ ಯತ್ನಾಳ್ ಚಾಲನೆ ನೀಡಿದರು. ನಮ್ಮ ಸಮಾಜದ ಒಗ್ಗಟ್ಟು ನೋಡಿ ಅದನ್ನು ಸಹಿಸದ ಕೆಲವರು ರಾಜಕೀಯ ದುರುದ್ದೇಶದಿಂದ ನೋಟಿಸ್ ಕೊಡಿಸಿದ್ದಾರೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರವಾಗಿ ಮತ್ತು ಸದನದಲ್ಲಿ ಮೀಸಲಾತಿ ಹೋರಾಟದ ಪರವಾಗಿ ಅವರು ಧ್ವನಿ ಎತ್ತಿದ್ದರು. ಕೆಲವು ಕಾಣದ ಶಕ್ತಿಗಳು ಬಿಜೆಪಿ ಕೇಂದ್ರ ನಾಯಕರಿಗೆ ತಪ್ಪು ಮಾಹಿತಿ ನೀಡಿ ನೋಟಿಸ್ ಕೊಡಿಸಿದ್ದಾರೆ’ ಎಂದು ಆರೋಪಿಸಿದರು.

ಮುಖ್ಯವಾಗಿ ಪಂಚಮಸಾಲಿ ಸಮಾಜದ ನಾಯಕರನ್ನೇ ಟಾರ್ಗೆಟ್ ಮಾಡಿದ್ದಾರೆ. ರಾಜ್ಯದ ವರಿಷ್ಠರು ಕೇಂದ್ರದ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟು ನೋಟಿಸ್ ಹಿಂಪಡೆಯಬೇಕು. ಇಲ್ಲದಿದ್ದರೆ ಫೆ. 21ರ ಸಮಾವೇಶದಲ್ಲಿ ನಮ್ಮ ಸಮಾಜದ ಜನರು ಆಕ್ರೋಶಗೊಳ್ಳುವರು. ಮುಂದಿನ ಅವಘಡಕ್ಕೆ ರಾಜ್ಯ ಸರ್ಕಾರವೇ ಹೊಣೆ’ ಎಂದು ಎಚ್ಚರಿಸಿದರು.

‘ಸರ್ಕಾರ ತಪ್ಪು ಮಾಡಿದಾಗ ಅವರು ನೇರವಾಗಿ ಮಾತನಾಡಿದ್ದು ತಪ್ಪೇ’ ಎಂದು ಸ್ವಾಮೀಜಿ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT