ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂ.29ರಂದು ಸಿಎಂ ನಿವಾಸದ ಎದುರು ಧರಣಿ: ಕೂಡಲ ಸಂಗಮಶ್ರೀ

Last Updated 29 ಮೇ 2022, 19:32 IST
ಅಕ್ಷರ ಗಾತ್ರ

ಹಾವೇರಿ: ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಜೂ.29ರಂದು ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಭಾನುವಾರ ನಡೆದ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘2ಎ ಮೀಸಲಾತಿಗೆ ಆಗ್ರಹಿಸಿ ಕಳೆದ ವರ್ಷ ಪಾದಯಾತ್ರೆ ನಡೆಸಿ ಹಕ್ಕೊತ್ತಾಯ ಮಾಡಲಾಗಿತ್ತು. ಆಗಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಮುಖ್ಯಮಂತ್ರಿ ಹುದ್ದೆಗೇರಿದ ಬಸವರಾಜ ಬೊಮ್ಮಾಯಿ ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಇನ್ನೂ ಈಡೇರಿಲ್ಲ’ ಎಂದರು.

‘ಈಗಾಗಲೇ ನಾಲ್ಕು ಹಂತದ ಹೋರಾಟ ಮುಗಿದಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಈಗ ಸತ್ಯಾಗ್ರಹ ನಡೆಸುವ ಮೂಲಕ ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೋರಾಟಕ್ಕೆ ಹಾವೇರಿಯಿಂದ ಚಾಲನೆ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT