<p>ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಲಾ ಬಿ.ನಾರಾಯಣರಾವ್ ಅವರು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದಾರೆ.</p>.<p>ನೇರವಾಗಿ ರಾಜಕೀಯ ಕ್ಷೇತ್ರಕ್ಕೆ ಈಚೆಗಷ್ಟೇ ಪಾದಾರ್ಪಣೆ ಮಾಡಿದರೂ ಅವರಿಗೆ ರಾಜಕೀಯ ಕ್ಷೇತ್ರ ಹೊಸದಲ್ಲ. ಅವರು ‘ಪ್ರಜಾವಾಣಿ’ಯೊಂದಿಗೆ ತಮ್ಮ ಮನದಾಳ ಹಂಚಿಕೊಂಡಿದ್ದಾರೆ.</p>.<p><strong><span class="Bullet">l</span> ಅನುಕಂಪದ ಅಲೆ ಗೆಲುವಿನ ದಡಸೇರಿಸುತ್ತದೆಯೇ?</strong></p>.<p>– ನನ್ನ ಪತಿ ಬಿ.ನಾರಾಯಣರಾವ್ ಅವರು ಈ ಕ್ಷೇತ್ರದ ಶಾಸಕರಾಗಿ ಕಡಿಮೆ ಅವಧಿಯಲ್ಲಿ ನಿರೀಕ್ಷೆಗೆ ಮೀರಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅನುಭವ ಮಂಟಪದ ಅಭಿವೃದ್ಧಿಗೆ ಅವರು ಪಟ್ಟಿರುವ ಶ್ರಮ ಎಲ್ಲರಿಗೂ ಗೊತ್ತಿದೆ.<br />ರಾಷ್ಟ್ರಪತಿ ಅವರನ್ನು ಆಹ್ವಾನಿಸಿ, ಅನುಭವ ಮಂಟಪ ಉದ್ಘಾಟಿಸುವ ಕನಸು ಅವರದ್ದಾಗಿತ್ತು. 18 ಕೆರೆಗಳನ್ನು ತುಂಬಿಸುವ ಯೋಜನೆ ಅವರದ್ದಾಗಿತ್ತು. ಅವರ ಕನಸು ನನಸಾಗಿಸಲು ಮತದಾರರು ಬೆಂಬಲವಾಗಿ <span class="Bullet">l</span> ವಿಶ್ವಾಸ ಇದೆ.</p>.<p><strong>l ಗೆದ್ದರೆ ನೀವು ಮಾಡುವ ಅಭಿವೃದ್ಧಿ ಕಾರ್ಯಗಳೇನು?</strong></p>.<p>–ಅಪೂರ್ಣಗೊಂಡಿರುವ ಕಾಮಗಾರಿ ಪೂರ್ಣಗೊಳಿಸುವುದು ಹಾಗೂ ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನನ್ನ ಗುರಿಯಾಗಿದೆ.</p>.<p><strong><span class="Bullet">l</span> ಪ್ರತಿಸ್ಪರ್ಧಿಗಳನ್ನು ಎದುರಿಸಲು ಏನು ತಯಾರಿ ಮಾಡಿಕೊಂಡಿದ್ದೀರಿ?</strong></p>.<p>– ನಾನು ರಾಜಕೀಯಕ್ಕೆ ಮೊದಲ ಬಾರಿಗೆ ಬಂದಿರಬಹುದು. ಆದರೆ, 35 ವರ್ಷಗಳ ಹಿಂದೆಯೇ ರಾಜಕೀಯದಲ್ಲಿರುವ ವ್ಯಕ್ತಿಯನ್ನೇ ವಿವಾಹವಾಗಿದ್ದೆ. ಬಹಿರಂಗವಾಗಿ ಕಾಣಿಸಿಕೊಳ್ಳದಿದ್ದರೂ ಪತಿಗೆ ಬೆಂಬಲವಾಗಿ ನಿಲ್ಲುವ ಜತೆಗೆ ರಾಜಕೀಯ ಚೆನ್ನಾಗಿ ಅರಿತುಕೊಂಡಿದ್ದೇನೆ. ನಮ್ಮ ಪಕ್ಷ, ಮುಖಂಡರು ಮತ್ತು ಕಾರ್ಯಕರ್ತರ ಪಡೆ ನನ್ನ ಗೆಲುವಿಗೆ ಶ್ರಮಿಸುತ್ತಿದೆ.</p>.<p><strong><span class="Bullet">l</span> ನಿಮ್ಮ ಗೆಲುವಿಗೆ ಜೆಡಿಎಸ್ ಅಭ್ಯರ್ಥಿ ತೊಡಕಾಗಲಿದ್ದಾರೆಯೇ?</strong></p>.<p>– ಕಾಂಗ್ರೆಸ್ ಅಷ್ಟೇ ಅಲ್ಲ, ನನ್ನ ಪತಿ ದಿ.ನಾರಾಯಣರಾವ್ ಅವರಿಗೆ ಅಲ್ಪಸಂಖ್ಯಾತರೊಂದಿಗೆ ಒಡನಾಟ ಇತ್ತು. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪರಿಶ್ರಮ ಪಟ್ಟಿದ್ದಾರೆ. ಅಲ್ಪಸಂಖ್ಯಾತರು ನನ್ನ ಕೈಬಿಡಲಾರರು.</p>.<p><strong><span class="Bullet">l</span> ಮತದಾರರ ಪ್ರತಿಕ್ರಿಯೆ ಹೇಗಿದೆ?</strong></p>.<p>– ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದೇನೆ. ಕ್ಷೇತ್ರದ ಜನ ಇನ್ನೂ ಬಿ.ನಾರಾಯಣರಾವ್ ಅವರನ್ನು ಮರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ಗೌರವ ಇದೆ. ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಕಿರಿಯರು, ಹಿರಿಯರು ಬೆಂಬಲ ನೀಡುತ್ತಿದ್ದಾರೆ.</p>.<p><strong><span class="Bullet">l</span> ಮತದಾರರಲ್ಲಿ ನಿಮ್ಮ ಮನವಿ ಏನು?</strong></p>.<p>– 2018ರಲ್ಲಿ ನನ್ನ ಪತಿಗೆ ಬೆಂಬಲ ನೀಡಿದಂತೆ ಅವರ ಪತ್ನಿಯಾದ ನನಗೂ ಮತದಾರರು ಬೆಂಬಲ ನೀಡಬೇಕು. ಕ್ಷೇತ್ರದ ಜನರ ಸೇವೆ ಮಾಡಲು ಒಂದು ಅವಕಾಶ ಕೊಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಲಾ ಬಿ.ನಾರಾಯಣರಾವ್ ಅವರು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದಾರೆ.</p>.<p>ನೇರವಾಗಿ ರಾಜಕೀಯ ಕ್ಷೇತ್ರಕ್ಕೆ ಈಚೆಗಷ್ಟೇ ಪಾದಾರ್ಪಣೆ ಮಾಡಿದರೂ ಅವರಿಗೆ ರಾಜಕೀಯ ಕ್ಷೇತ್ರ ಹೊಸದಲ್ಲ. ಅವರು ‘ಪ್ರಜಾವಾಣಿ’ಯೊಂದಿಗೆ ತಮ್ಮ ಮನದಾಳ ಹಂಚಿಕೊಂಡಿದ್ದಾರೆ.</p>.<p><strong><span class="Bullet">l</span> ಅನುಕಂಪದ ಅಲೆ ಗೆಲುವಿನ ದಡಸೇರಿಸುತ್ತದೆಯೇ?</strong></p>.<p>– ನನ್ನ ಪತಿ ಬಿ.ನಾರಾಯಣರಾವ್ ಅವರು ಈ ಕ್ಷೇತ್ರದ ಶಾಸಕರಾಗಿ ಕಡಿಮೆ ಅವಧಿಯಲ್ಲಿ ನಿರೀಕ್ಷೆಗೆ ಮೀರಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅನುಭವ ಮಂಟಪದ ಅಭಿವೃದ್ಧಿಗೆ ಅವರು ಪಟ್ಟಿರುವ ಶ್ರಮ ಎಲ್ಲರಿಗೂ ಗೊತ್ತಿದೆ.<br />ರಾಷ್ಟ್ರಪತಿ ಅವರನ್ನು ಆಹ್ವಾನಿಸಿ, ಅನುಭವ ಮಂಟಪ ಉದ್ಘಾಟಿಸುವ ಕನಸು ಅವರದ್ದಾಗಿತ್ತು. 18 ಕೆರೆಗಳನ್ನು ತುಂಬಿಸುವ ಯೋಜನೆ ಅವರದ್ದಾಗಿತ್ತು. ಅವರ ಕನಸು ನನಸಾಗಿಸಲು ಮತದಾರರು ಬೆಂಬಲವಾಗಿ <span class="Bullet">l</span> ವಿಶ್ವಾಸ ಇದೆ.</p>.<p><strong>l ಗೆದ್ದರೆ ನೀವು ಮಾಡುವ ಅಭಿವೃದ್ಧಿ ಕಾರ್ಯಗಳೇನು?</strong></p>.<p>–ಅಪೂರ್ಣಗೊಂಡಿರುವ ಕಾಮಗಾರಿ ಪೂರ್ಣಗೊಳಿಸುವುದು ಹಾಗೂ ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನನ್ನ ಗುರಿಯಾಗಿದೆ.</p>.<p><strong><span class="Bullet">l</span> ಪ್ರತಿಸ್ಪರ್ಧಿಗಳನ್ನು ಎದುರಿಸಲು ಏನು ತಯಾರಿ ಮಾಡಿಕೊಂಡಿದ್ದೀರಿ?</strong></p>.<p>– ನಾನು ರಾಜಕೀಯಕ್ಕೆ ಮೊದಲ ಬಾರಿಗೆ ಬಂದಿರಬಹುದು. ಆದರೆ, 35 ವರ್ಷಗಳ ಹಿಂದೆಯೇ ರಾಜಕೀಯದಲ್ಲಿರುವ ವ್ಯಕ್ತಿಯನ್ನೇ ವಿವಾಹವಾಗಿದ್ದೆ. ಬಹಿರಂಗವಾಗಿ ಕಾಣಿಸಿಕೊಳ್ಳದಿದ್ದರೂ ಪತಿಗೆ ಬೆಂಬಲವಾಗಿ ನಿಲ್ಲುವ ಜತೆಗೆ ರಾಜಕೀಯ ಚೆನ್ನಾಗಿ ಅರಿತುಕೊಂಡಿದ್ದೇನೆ. ನಮ್ಮ ಪಕ್ಷ, ಮುಖಂಡರು ಮತ್ತು ಕಾರ್ಯಕರ್ತರ ಪಡೆ ನನ್ನ ಗೆಲುವಿಗೆ ಶ್ರಮಿಸುತ್ತಿದೆ.</p>.<p><strong><span class="Bullet">l</span> ನಿಮ್ಮ ಗೆಲುವಿಗೆ ಜೆಡಿಎಸ್ ಅಭ್ಯರ್ಥಿ ತೊಡಕಾಗಲಿದ್ದಾರೆಯೇ?</strong></p>.<p>– ಕಾಂಗ್ರೆಸ್ ಅಷ್ಟೇ ಅಲ್ಲ, ನನ್ನ ಪತಿ ದಿ.ನಾರಾಯಣರಾವ್ ಅವರಿಗೆ ಅಲ್ಪಸಂಖ್ಯಾತರೊಂದಿಗೆ ಒಡನಾಟ ಇತ್ತು. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪರಿಶ್ರಮ ಪಟ್ಟಿದ್ದಾರೆ. ಅಲ್ಪಸಂಖ್ಯಾತರು ನನ್ನ ಕೈಬಿಡಲಾರರು.</p>.<p><strong><span class="Bullet">l</span> ಮತದಾರರ ಪ್ರತಿಕ್ರಿಯೆ ಹೇಗಿದೆ?</strong></p>.<p>– ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದೇನೆ. ಕ್ಷೇತ್ರದ ಜನ ಇನ್ನೂ ಬಿ.ನಾರಾಯಣರಾವ್ ಅವರನ್ನು ಮರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ಗೌರವ ಇದೆ. ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಕಿರಿಯರು, ಹಿರಿಯರು ಬೆಂಬಲ ನೀಡುತ್ತಿದ್ದಾರೆ.</p>.<p><strong><span class="Bullet">l</span> ಮತದಾರರಲ್ಲಿ ನಿಮ್ಮ ಮನವಿ ಏನು?</strong></p>.<p>– 2018ರಲ್ಲಿ ನನ್ನ ಪತಿಗೆ ಬೆಂಬಲ ನೀಡಿದಂತೆ ಅವರ ಪತ್ನಿಯಾದ ನನಗೂ ಮತದಾರರು ಬೆಂಬಲ ನೀಡಬೇಕು. ಕ್ಷೇತ್ರದ ಜನರ ಸೇವೆ ಮಾಡಲು ಒಂದು ಅವಕಾಶ ಕೊಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>