<p>‘ಬಡೇಶಾ ಸಾಹೇಬ್’ ಎಂದೇ ಪರಿಚಿತರಾದ ಬಸವಕಲ್ಯಾಣದ ಬಡೇಶಾ ದರ್ಗಾದ ಮುಖ್ಯಸ್ಥ ಹಾಗೂ ಲಾರಿ ಉದ್ಯಮಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರು 15 ವರ್ಷಗಳಿಂದ ಕಾಂಗ್ರೆಸ್ನಲ್ಲೇ ಗುರುತಿಸಿಕೊಂಡವರು. ಈಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ‘ಪ್ರಜಾವಾಣಿ’ಯೊಂದಿಗೆ ಅವರು ಮಾತನಾಡಿದ್ದಾರೆ.</p>.<p><strong><span class="Bullet">l</span> ಕಾಂಗ್ರೆಸ್ನ ಸಾಂಪ್ರದಾಯಿಕ ಮತ ನಿಮಗೆ ದೊರೆಯುತ್ತವೆಯೇ?</strong></p>.<p>– ಬಸವಕಲ್ಯಾಣದಲ್ಲಿ ಅತಿವೃಷ್ಟಿಯಿಂದ ಮನೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ₹ 24 ಲಕ್ಷ ಮೊತ್ತದ ಚೆಕ್ ಕೊಟ್ಟಿದ್ದರು. ಅವರು ಉಜಳಂಬದಲ್ಲಿ ₹ 32 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿ, ಅಲ್ಪಸಂಖ್ಯಾತರಿಗೆ ಯೋಜನೆಗಳನ್ನು ರೂಪಿಸಿದ್ದರು. ಹೀಗಾಗಿ ಅಲ್ಪಸಂಖ್ಯಾತರು ಜೆಡಿಎಸ್ ಬೆಂಬಲಿಸುವ ನಿರೀಕ್ಷೆ ಇದೆ.</p>.<p><strong><span class="Bullet">l</span> ಗೆದ್ದರೆ ನೀವು ಮಾಡುವ ಅಭಿವೃದ್ಧಿ ಕಾರ್ಯಗಳೇನು?</strong></p>.<p>–ಆಟೊನಗರ ಅಭಿವೃದ್ಧಿ, ಹಣ್ಣಿನ ಸಗಟು ಮಾರುಕಟ್ಟೆ ನಿರ್ಮಾಣ ಮತ್ತು ಶಿಕ್ಷಣಕ್ಕೆ ಒತ್ತು ಕೊಟ್ಟು ಗುಣಮಟ್ಟದ ಶಿಕ್ಷಣ ಕೊಡಿಸುವುದು ನನ್ನ ಉದ್ದೇಶ.</p>.<p><strong><span class="Bullet">l</span> ಕೊನೆಯ ಗಳಿಗೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದೀರಿ..</strong></p>.<p>–ಕಾಂಗ್ರೆಸ್ ಹಾಗೂ ಜೆಡಿಎಸ್ನ ಸಿದ್ಧಾಂತಗಳಲ್ಲಿ ಸಾಮ್ಯತೆ ಇದೆ. ಜಾತ್ಯತೀತ ಪಕ್ಷವಾಗಿರುವ ಕಾರಣ ಜೆಡಿಎಸ್ನಲ್ಲಿ ಹೊಂದಿಕೊಳ್ಳಲು ಕಷ್ಟವಾಗಿಲ್ಲ.</p>.<p><strong><span class="Bullet">l</span> ಎಐಎಂಐಎಂ ಅಭ್ಯರ್ಥಿಯೂ ಸ್ಪರ್ಧಿಸಿದ್ದು, ಮುಸ್ಲಿಂಮತ ವಿಭಜನೆಯಾಗಲಿವೆಯೇ?</strong></p>.<p>– 2018ರ ವಿಧಾನಸಭಾ ಚುನಾವಣೆಯಲ್ಲಿ ಎಐಎಐಎಂ ಜೆಡಿಎಸ್ಗೆ ಬೆಂಬಲ ನೀಡಿತ್ತು. ಅದು ಒಂದು ಕೋಮಿಗೆ ಸೀಮಿತ ಪಕ್ಷವಾದ್ದರಿಂದ ಬೆಳಗಾವಿಯಲ್ಲಿ ಎಐಎಐಎಂ ನಿಂದ ಲಾಭಕ್ಕಿಂತ ಹಾನಿ ಹೆಚ್ಚಾಯಿತು. ಕೆಲವಷ್ಟು ಜಾತ್ಯತೀತ ಮತಗಳು ಕೈಬಿಟ್ಟು ಹೋಗಿದ್ದವು. ಈ ಬಾರಿ ಹಾಗೆ ಆಗುವುದಿಲ್ಲ.</p>.<p><strong><span class="Bullet">l</span> ಮತದಾರರಲ್ಲಿ ನಿಮ್ಮ ಮನವಿ ಏನು?</strong></p>.<p>–ಜೆಡಿಎಸ್ ಅಧಿಕಾರದ ಅವಧಿಯಲ್ಲಿ ಬಸವಕಲ್ಯಾಣ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ದೊರೆತಿದೆ. ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಾಗೂ ಬಸವಕಲ್ಯಾಣ ಜಾತ್ಯತೀತ ನೆಲ ಎನ್ನುವುದನ್ನು ಸಾಬೀತು ಪಡಿಸಲು ಮತದಾರರು ಜೆಡಿಎಸ್ಗೆ ಬೆಂಬಲ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಬಡೇಶಾ ಸಾಹೇಬ್’ ಎಂದೇ ಪರಿಚಿತರಾದ ಬಸವಕಲ್ಯಾಣದ ಬಡೇಶಾ ದರ್ಗಾದ ಮುಖ್ಯಸ್ಥ ಹಾಗೂ ಲಾರಿ ಉದ್ಯಮಿ ಸೈಯದ್ ಯಸ್ರಬ್ ಅಲಿ ಖಾದ್ರಿ ಅವರು 15 ವರ್ಷಗಳಿಂದ ಕಾಂಗ್ರೆಸ್ನಲ್ಲೇ ಗುರುತಿಸಿಕೊಂಡವರು. ಈಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ‘ಪ್ರಜಾವಾಣಿ’ಯೊಂದಿಗೆ ಅವರು ಮಾತನಾಡಿದ್ದಾರೆ.</p>.<p><strong><span class="Bullet">l</span> ಕಾಂಗ್ರೆಸ್ನ ಸಾಂಪ್ರದಾಯಿಕ ಮತ ನಿಮಗೆ ದೊರೆಯುತ್ತವೆಯೇ?</strong></p>.<p>– ಬಸವಕಲ್ಯಾಣದಲ್ಲಿ ಅತಿವೃಷ್ಟಿಯಿಂದ ಮನೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ₹ 24 ಲಕ್ಷ ಮೊತ್ತದ ಚೆಕ್ ಕೊಟ್ಟಿದ್ದರು. ಅವರು ಉಜಳಂಬದಲ್ಲಿ ₹ 32 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿ, ಅಲ್ಪಸಂಖ್ಯಾತರಿಗೆ ಯೋಜನೆಗಳನ್ನು ರೂಪಿಸಿದ್ದರು. ಹೀಗಾಗಿ ಅಲ್ಪಸಂಖ್ಯಾತರು ಜೆಡಿಎಸ್ ಬೆಂಬಲಿಸುವ ನಿರೀಕ್ಷೆ ಇದೆ.</p>.<p><strong><span class="Bullet">l</span> ಗೆದ್ದರೆ ನೀವು ಮಾಡುವ ಅಭಿವೃದ್ಧಿ ಕಾರ್ಯಗಳೇನು?</strong></p>.<p>–ಆಟೊನಗರ ಅಭಿವೃದ್ಧಿ, ಹಣ್ಣಿನ ಸಗಟು ಮಾರುಕಟ್ಟೆ ನಿರ್ಮಾಣ ಮತ್ತು ಶಿಕ್ಷಣಕ್ಕೆ ಒತ್ತು ಕೊಟ್ಟು ಗುಣಮಟ್ಟದ ಶಿಕ್ಷಣ ಕೊಡಿಸುವುದು ನನ್ನ ಉದ್ದೇಶ.</p>.<p><strong><span class="Bullet">l</span> ಕೊನೆಯ ಗಳಿಗೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದೀರಿ..</strong></p>.<p>–ಕಾಂಗ್ರೆಸ್ ಹಾಗೂ ಜೆಡಿಎಸ್ನ ಸಿದ್ಧಾಂತಗಳಲ್ಲಿ ಸಾಮ್ಯತೆ ಇದೆ. ಜಾತ್ಯತೀತ ಪಕ್ಷವಾಗಿರುವ ಕಾರಣ ಜೆಡಿಎಸ್ನಲ್ಲಿ ಹೊಂದಿಕೊಳ್ಳಲು ಕಷ್ಟವಾಗಿಲ್ಲ.</p>.<p><strong><span class="Bullet">l</span> ಎಐಎಂಐಎಂ ಅಭ್ಯರ್ಥಿಯೂ ಸ್ಪರ್ಧಿಸಿದ್ದು, ಮುಸ್ಲಿಂಮತ ವಿಭಜನೆಯಾಗಲಿವೆಯೇ?</strong></p>.<p>– 2018ರ ವಿಧಾನಸಭಾ ಚುನಾವಣೆಯಲ್ಲಿ ಎಐಎಐಎಂ ಜೆಡಿಎಸ್ಗೆ ಬೆಂಬಲ ನೀಡಿತ್ತು. ಅದು ಒಂದು ಕೋಮಿಗೆ ಸೀಮಿತ ಪಕ್ಷವಾದ್ದರಿಂದ ಬೆಳಗಾವಿಯಲ್ಲಿ ಎಐಎಐಎಂ ನಿಂದ ಲಾಭಕ್ಕಿಂತ ಹಾನಿ ಹೆಚ್ಚಾಯಿತು. ಕೆಲವಷ್ಟು ಜಾತ್ಯತೀತ ಮತಗಳು ಕೈಬಿಟ್ಟು ಹೋಗಿದ್ದವು. ಈ ಬಾರಿ ಹಾಗೆ ಆಗುವುದಿಲ್ಲ.</p>.<p><strong><span class="Bullet">l</span> ಮತದಾರರಲ್ಲಿ ನಿಮ್ಮ ಮನವಿ ಏನು?</strong></p>.<p>–ಜೆಡಿಎಸ್ ಅಧಿಕಾರದ ಅವಧಿಯಲ್ಲಿ ಬಸವಕಲ್ಯಾಣ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ದೊರೆತಿದೆ. ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಾಗೂ ಬಸವಕಲ್ಯಾಣ ಜಾತ್ಯತೀತ ನೆಲ ಎನ್ನುವುದನ್ನು ಸಾಬೀತು ಪಡಿಸಲು ಮತದಾರರು ಜೆಡಿಎಸ್ಗೆ ಬೆಂಬಲ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>