ಈ ಮಧ್ಯೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಬೇಕು ಎಂದು ಮಠದ ಭಕ್ತರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
****
ಸ್ವಾಮೀಜಿ ಬರೆದ 2 ಡೆತ್ ನೋಟ್ಗಳು ಪೊಲೀಸರಿಗೆ ಸಿಕ್ಕಿವೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದು, ಯಾರನ್ನೂ ವಶಕ್ಕೆ ಪಡೆದಿಲ್ಲ. ವಿಡಿಯೊ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ.
-ಸಂತೋಷ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ರಾಮನಗರ