ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹ 3 ಕೋಟಿ ನೆರವು: ಬಸವರಾಜ ಬೊಮ್ಮಾಯಿ

ಮಹಾರಾಷ್ಟ್ರ ನೆಲದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ; ಕನ್ಹೇರಿ ಮಠದಲ್ಲಿ ಸಂತ ಸಮಾವೇಶ
Last Updated 11 ಅಕ್ಟೋಬರ್ 2022, 4:25 IST
ಅಕ್ಷರ ಗಾತ್ರ

ಕನ್ಹೇರಿ (ಕೊಲ್ಹಾಪುರ ಜಿಲ್ಲೆ): ‘ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನ್ಹೇರಿಯ ಸಿದ್ದಗಿರಿ ಮಠದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹ 3 ಕೋಟಿ ನೆರವು ನೀಡುವುದಾಗಿ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮಠದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸಮಾವೇಶ ಉದ್ಘಾಟಿಸಿ, ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಈಗಾಗಲೇ
₹ 1 ಕೋಟಿ ನೀಡಿದ್ದು, ದೀಪಾವಳಿ ಹಬ್ಬಕ್ಕೆ ಮತ್ತೆ ₹ 2 ಕೋಟಿ ನೀಡಲಾ ಗುವುದು’ ಎಂದು ಭರವಸೆ ನೀಡಿದರು.

‘ಕನ್ಹೇರಿ ಮಠವು ದೇಶದ ಆದರ್ಶ ಮಠವಾಗಿದೆ. ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಕರ್ನಾಟಕದಲ್ಲಿಯೂ ದೊಡ್ಡ ಮಠ ತೆರೆಯಬೇಕು. ಅವರ ಆದರ್ಶ ಕೆಲಸಗಳು ನಮಗೂ ಬೇಕು. ಮಠಕ್ಕೆ ಬೇಕಾಗುವ ಜಾಗ ಹಾಗೂ ಅಗತ್ಯ ನೆರವನ್ನು ನೀಡಲಾಗುವುದು’ ಎಂದೂ ವಾಗ್ದಾನ ಮಾಡಿದರು.

ಮತಾಂತರ ತಡೆಯಬೇಕು: ‘ಸ್ವಾಮೀಜಿಗಳು ಮತಾಂತರ ತಡೆಯಲು ಮುಂದಾಗಬೇಕು. ಇಲ್ಲವಾದರೆ ಮತಾಂತರ ರೀತಿಯಲ್ಲೇ ನಮ್ಮನ್ನು ದೇಶಾಂತರ ಮಾಡುತ್ತಾರೆ’ ಎಂದು ಕನ್ಹೇರಿ ಸಿದ್ಧಗಿರಿ ಮಠಾಧೀಶ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕೃಷಿ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT