ಭೋಜನ ಕೂಟಕ್ಕೆ ಎಲ್ಲ ಶಾಸಕರು ಮತ್ತು ಸಂಸದರಿಗೂ ಆಹ್ವಾನ ನೀಡಿದ್ದರೂ ಬೆಂಗಳೂರಿನಲ್ಲಿ ಇದ್ದವರು ಮಾತ್ರ ಹಾಜರಿದ್ದರು. ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಜಿ.ಎಂ.ಸಿದ್ದೇಶ್, ಜಿ.ಎಸ್.ಬಸವರಾಜ್, ಡಿ.ವಿ.ಸದಾನಂದಗೌಡ, ಶಾಸಕರಾದ ಅಶ್ವತ್ಥನಾರಾಯಣ, ರಾಜಕುಮಾರ್ ಪಾಟೀಲ ತೆಲ್ಕೂರ್, ಸುರೇಶ್ ಕುಮಾರ್, ರವಿಸುಬ್ರಹ್ಮಣ್ಯ, ಎಂ.ಪಿ.ರೇಣುಕಾಚಾರ್ಯ, ಕುಮಾರ್ ಬಂಗಾರಪ್ಪ, ಎಸ್.ಆರ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯರ ಎನ್.ರವಿಕುಮಾರ್, ಸಿ.ಪಿ.ಯೋಗೇಶ್ವರ್, ರೂಪಾಲಿ ನಾಯ್ಕ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂತಾದವರು ಭಾಗವಹಿಸಿದ್ದರು.