‘ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೇಳಿರುವ ಆರು ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ಈ ಪ್ರಕರಣಕ್ಕೆ 2016ರಿಂದ ಕರ್ನಾಟಕದೊಂದಿಗೆ ಸಂಬಂಧ ಇರುವುದಾದರೆ, ಆಗ ಅಧಿಕಾರದಲ್ಲಿದ್ದ ಅವರ (ಕಾಂಗ್ರೆಸ್) ಸರ್ಕಾರ ತನಿಖೆ ಏಕೆ ಕೈಗೊಳ್ಳಲಿಲ್ಲ. ಅವರ ಪಕ್ಷದ ಮುಖ್ಯಮಂತ್ರಿ, ಸಚಿವರು ಯಾಕೆ ಗಮನಹರಿಸಲಿಲ್ಲ. ಆರೋಪಿ ಶ್ರೀಕೃಷ್ಣನನ್ನು ಬಂಧಿಸಿ, ಬಿಟ್ಟು ಕಳುಹಿಸಲಾಯಿತು. ನಿರೀಕ್ಷಣಾ ಜಾಮೀನು ಪಡೆದಾಗಲೂ ವಿಚಾರಣೆಗೆ ಅವಕಾಶವಿತ್ತು. ಮುಕ್ತವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬಿಟ್ಟು ನಮ್ಮನ್ನು ಈಗ ಏಕೆ ಪ್ರಶ್ನಿಸುತ್ತಿದ್ದಾರೆ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ‘ಆರೋಪಿಯನ್ನು ಬಿಟ್ಟು ಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ’ ಎಂದರು.