ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್ ಮತದಾರರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ‌: ಬಸವರಾಜ ಬೊಮ್ಮಾಯಿ

Last Updated 2 ನವೆಂಬರ್ 2021, 14:19 IST
ಅಕ್ಷರ ಗಾತ್ರ

ಬೆಂಗಳೂರು: ಹಾನಗಲ್ ಮತದಾರರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಟ್ವೀಟ್‌ ಮಾಡಿರುವ ಅವರು, ' ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಶ್ರೀನಿವಾಸ ಮಾನೆ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸೋಲುಗೆಲುವು ಸಹಜವಾಗಿದೆ. ಹಾನಗಲ್ ಮತದಾರರ ಈ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ‌. ಹಾನಗಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರವನ್ನು ಮುಂದುವರೆಸುವುದಾಗಿ ತಿಳಿಸುತ್ತೇನೆ' ಎಂದು ಹೇಳಿದ್ದಾರೆ.

'ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀ ರಮೇಶ ಭೂಸನೂರ ಅವರಿಗೆ ಹಾಗೂ ಅವರ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು' ಎಂದೂ ಬೊಮ್ಮಾಯಿ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT