ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್‌ ಹಂತಕರು ಎಲ್ಲೇ ಇದ್ದರೂ ಸದೆ ಬಡಿಯುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

Last Updated 27 ಜುಲೈ 2022, 10:10 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿದ ಹಂತಕರು ಎಲ್ಲೇ ಇದ್ದರೂ ಹಿಡಿದು ತಂದು ಸದೆ ಬಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಕೊಲೆಗಡುಕರು ಕರ್ನಾಟಕ ಗಡಿ ದಾಟಿ ಕೇರಳಕ್ಕೆ ಹೋಗಿದ್ದರೂ ಬಿಡುವುದಿಲ್ಲ. ಅಲ್ಲಿನ ಸರ್ಕಾರದ ಜತೆ ಮಾತನಾಡಿದ್ದೇವೆ'ಎಂದುತಿಳಿಸಿದರು.

ರಾತ್ರಿ ವೇಳೆ ಹಿಂಬದಿಯಿಂದ ಬಂದು ಮೋಸದಿಂದ ಕೊಲೆ ಮಾಡಿದ್ದಾರೆ. ಇದರ ಹಿಂದೆ ವ್ಯವಸ್ಥಿತಸಂಚು ಇದೆ. ಸಮಾಜದಲ್ಲಿ ಕ್ಷೋಭೆ ಉಂಟು ಮಾಡಬೇಕು ಎಂಬುದು ಅವರ ಉದ್ದೇಶ. ಆದರೆ ಇವರಿಗೆ ಉಗ್ರ ಶಿಕ್ಷೆ ಕಾದಿದೆ. ಅಮಾಯಕ ಕಾರ್ಯಕರ್ತನ ಕೊಲೆ ಆಗಿರುವುದರಿಂದ ಕಾರ್ಯಕರ್ತರುಆಕ್ರೋಶಗೊಂಡಿದ್ದಾರೆ. ಸಂಯಮದಿಂದ ಇರಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಬೊಮ್ಮಾಯಿ ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT