ಪಣಜಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ. ಅವರ ನೇತೃತ್ವದಲ್ಲಿ ಜನರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿದೆ. ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲೇ ಅವರು ಆಡಳಿತದಲ್ಲಿ ಉತ್ತಮ ವಾತಾವರಣ ಕಾಣುವಂತೆ ಮಾಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ಬಿ.ಜೆ.ಪಿ.ಯಲ್ಲಿ ಅತೃಪ್ತಿಯ ಪ್ರಶ್ನೆಯೇ ಬರುವುದಿಲ್ಲ. ಮುಂಬರುವ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿ.ಜೆ.ಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.