<p><strong>ಹರಿಹರ</strong>: ಎಲ್ಲಾ ಸಮಾಜಗಳನ್ನು ಒಂದೇ ರೀತಿ ಸಮಾನಾಗಿ ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಬೇಕು ಎಂಬ ನಿಮ್ಮ ಒಕ್ಕೊರೊಳ ಮನವಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಜಯಪ್ರಕಾಶ್ ಹೆಗ್ಡೆಆಯೋಗದ ಸಮೀಕ್ಷೆಯ ವರದಿ ಬಂದ ಬಳಿಕ ಈ ಕಾರ್ಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>ನಾವು ನೇಮಿಸಿದ ಹಿಂದುಳಿದ ವರ್ಗದ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆಯನ್ನು ನೀಡುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಆಯೋಗವು ಪ್ರತಿ ಜಿಲ್ಲೆಗಳಿಗೆ ಹೋಗಿ ಸಮೀಕ್ಷೆ ನಡೆಸುತ್ತಿದೆ. ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಸಮಾಜ ಶಕ್ತಿಯುತವಾಗಿ ಆಗಬೇಕಿದ್ದರೆ ಒಂದೇ ಧ್ವನಿ ಇರಬೇಕು ಇರಬೇಕು. ಭಕ್ತರು ಒಟ್ಟಿಗೆ ಇರಬೇಕು. ಪ್ರತ್ಯೇಕ ಧ್ವನಿಗಳು ಇರಬಾರದು ಎಂದು ಹೇಳಿದರು.</p>.<p>ಈ ನಾಡಿನ ನೆಲ, ಜಲ, ಭಾಷೆ, ಗಡಿಗಳ ವಿಚಾರ ಬಂದಾಗ ನಾವು ರಾಜಕೀಯವನ್ನು ಮರೆತು ಎಲ್ಲಾ ಪಕ್ಷಗಳು ಒಂದಾಗುತ್ತೇವೆ. ಅದೇ ರೀತಿ ನೀವು ಕೂಡ ಒಂದಾಗಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಎಲ್ಲಾ ಸಮಾಜಗಳನ್ನು ಒಂದೇ ರೀತಿ ಸಮಾನಾಗಿ ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಬೇಕು ಎಂಬ ನಿಮ್ಮ ಒಕ್ಕೊರೊಳ ಮನವಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಜಯಪ್ರಕಾಶ್ ಹೆಗ್ಡೆಆಯೋಗದ ಸಮೀಕ್ಷೆಯ ವರದಿ ಬಂದ ಬಳಿಕ ಈ ಕಾರ್ಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಶನಿವಾರ ಮಾತನಾಡಿದರು.</p>.<p>ನಾವು ನೇಮಿಸಿದ ಹಿಂದುಳಿದ ವರ್ಗದ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆಯನ್ನು ನೀಡುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಆಯೋಗವು ಪ್ರತಿ ಜಿಲ್ಲೆಗಳಿಗೆ ಹೋಗಿ ಸಮೀಕ್ಷೆ ನಡೆಸುತ್ತಿದೆ. ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಸಮಾಜ ಶಕ್ತಿಯುತವಾಗಿ ಆಗಬೇಕಿದ್ದರೆ ಒಂದೇ ಧ್ವನಿ ಇರಬೇಕು ಇರಬೇಕು. ಭಕ್ತರು ಒಟ್ಟಿಗೆ ಇರಬೇಕು. ಪ್ರತ್ಯೇಕ ಧ್ವನಿಗಳು ಇರಬಾರದು ಎಂದು ಹೇಳಿದರು.</p>.<p>ಈ ನಾಡಿನ ನೆಲ, ಜಲ, ಭಾಷೆ, ಗಡಿಗಳ ವಿಚಾರ ಬಂದಾಗ ನಾವು ರಾಜಕೀಯವನ್ನು ಮರೆತು ಎಲ್ಲಾ ಪಕ್ಷಗಳು ಒಂದಾಗುತ್ತೇವೆ. ಅದೇ ರೀತಿ ನೀವು ಕೂಡ ಒಂದಾಗಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>