ಕೃಷ್ಣರಾಜಸಾಗರ ಅಣೆಕಟ್ಟು ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳಿಗೂ ತಮಿಳುನಾಡು ಅಡ್ಡಿ ಮಾಡುತ್ತಲೇ ಬಂದಿತ್ತು. ಎಲ್ಲದಲ್ಲೂ ಆಕ್ಷೇಪ ವ್ಯಕ್ತಪಡಿಸಿತ್ತು. ನಾವು ಈಗ ಮಾಡಲು ಹೊರಟಿರುವುದು ಕುಡಿಯುವ ನೀರು ಮತ್ತು ಜಲವಿದ್ಯುತ್ ಉತ್ಪಾದನೆ ಯೋಜನೆಯಾಗಿದೆ. ಜಲ ಸಂಕಷ್ಟದ ಸಂದರ್ಭದಲ್ಲಿ ನೀರು ನಿರ್ವಹಣೆಗೂ ಈ ಯೋಜನೆ ಸಹಾಯಕವಾಗಲಿದೆ ಎಂದರು.