ಬೆಂಗಳೂರು: ‘ರೈತರ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್ಕಿಟ್’ ಸಿದ್ಧಪಡಿಸಿದ ಪ್ರಕರಣದಲ್ಲಿ ದಿಶಾ ರವಿ ವಿರುದ್ಧ ದೆಹಲಿಯಲ್ಲಿ ದೂರು ದಾಖಲಾಗಿತ್ತು. ಅಲ್ಲಿನ ಪೊಲೀಸರ ಬಳಿ ಕೆಲವು ಸಾಕ್ಷ್ಯಗಳಿದ್ದವು. ಪ್ರಕರಣ ಈಗ ದೆಹಲಿ ನ್ಯಾಯಾಲಯದಲ್ಲಿದೆ. ಹೀಗಾಗಿ, ಈ ವಿಷಯದಲ್ಲಿ ಹೆಚ್ಚು ಹೇಳಲಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.