<p><strong>ಬೆಳಗಾವಿ:</strong> ‘ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು. ಹೀಗಿರುವಾಗ ಶಾಸಕ ಸತೀಶ ಜಾರಕಿಹೊಳಿ ಮಾತು ಆಡಿದ್ದಷ್ಟೇ ಅಲ್ಲ, ಅದನ್ನು ಸಮರ್ಥಿಸಿಕೊಳ್ಳುವ ಸಾಹಸ ಮಾಡಿದರು. ಈಗ ವಿಷಾದ ವ್ಯಕ್ತಪಡಿಸಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.</p>.<p>‘ಹಿಂದೂ’ ಪದದ ಬಗ್ಗೆ ತಾವು ನೀಡಿದ್ದ ಹೇಳಿಕೆ ಹಿಂದಕ್ಕೆ ಪಡೆದಿರುವುದಾಗಿ ಸತೀಶ ಜಾರಕಿಹೊಳಿ ಬರೆದ ಪತ್ರದ ವಿಚಾರವಾಗಿ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.</p>.<p>‘ಸತೀಶ ಅವರು ಶಬ್ದಕೋಶ ನೋಡಿ ಮಾತನಾಡಿದ್ದೇನೆ ಎನ್ನುತ್ತಾರೆ. ಆದರೆ, ಅದರ ಅರ್ಹತೆ ಏನು? ಈಗಾಗಲೇ ವಿಕಿಪೀಡಿಯಾ ಹಲವು ಬಾರಿ ತನಿಖೆಗೆ ಒಳಪಟ್ಟಿದೆ. ಆ ಸಂಸ್ಥೆಯ ಮುಖ್ಯಸ್ಥನ ಮೇಲೆ ಹಲವು ಪ್ರಕರಣಗಳಿವೆ’ ಎಂದ ಬೊಮ್ಮಾಯಿ, ‘ನನಗೆ ಅವರು ನೀಡಿರುವ ಪತ್ರದಲ್ಲಿ ಯಾವ ಅಂಶಗಳಿವೆ ಎಂಬುದನ್ನು ಪರಿಶೀಲಿಸುತ್ತೇನೆ. ತನಿಖೆ ಮಾಡುವುದಕ್ಕೆ ಏನಿದೆ’ ಎಂದು ಪ್ರಶ್ನಿಸಿದರು.</p>.<p>ಓದಿ...<a href="https://www.prajavani.net/karnataka-news/satish-jarkiholi-withdraws-his-statement-on-hindu-987153.html" target="_blank"> ‘ಹಿಂದೂ’ ಪದ ವಿವಾದ: ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ -ಸತೀಶ ಜಾರಕಿಹೊಳಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಾತು ಆಡಿದರೆ ಹೋಯಿತು. ಮುತ್ತು ಒಡೆದರೆ ಹೋಯಿತು. ಹೀಗಿರುವಾಗ ಶಾಸಕ ಸತೀಶ ಜಾರಕಿಹೊಳಿ ಮಾತು ಆಡಿದ್ದಷ್ಟೇ ಅಲ್ಲ, ಅದನ್ನು ಸಮರ್ಥಿಸಿಕೊಳ್ಳುವ ಸಾಹಸ ಮಾಡಿದರು. ಈಗ ವಿಷಾದ ವ್ಯಕ್ತಪಡಿಸಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.</p>.<p>‘ಹಿಂದೂ’ ಪದದ ಬಗ್ಗೆ ತಾವು ನೀಡಿದ್ದ ಹೇಳಿಕೆ ಹಿಂದಕ್ಕೆ ಪಡೆದಿರುವುದಾಗಿ ಸತೀಶ ಜಾರಕಿಹೊಳಿ ಬರೆದ ಪತ್ರದ ವಿಚಾರವಾಗಿ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.</p>.<p>‘ಸತೀಶ ಅವರು ಶಬ್ದಕೋಶ ನೋಡಿ ಮಾತನಾಡಿದ್ದೇನೆ ಎನ್ನುತ್ತಾರೆ. ಆದರೆ, ಅದರ ಅರ್ಹತೆ ಏನು? ಈಗಾಗಲೇ ವಿಕಿಪೀಡಿಯಾ ಹಲವು ಬಾರಿ ತನಿಖೆಗೆ ಒಳಪಟ್ಟಿದೆ. ಆ ಸಂಸ್ಥೆಯ ಮುಖ್ಯಸ್ಥನ ಮೇಲೆ ಹಲವು ಪ್ರಕರಣಗಳಿವೆ’ ಎಂದ ಬೊಮ್ಮಾಯಿ, ‘ನನಗೆ ಅವರು ನೀಡಿರುವ ಪತ್ರದಲ್ಲಿ ಯಾವ ಅಂಶಗಳಿವೆ ಎಂಬುದನ್ನು ಪರಿಶೀಲಿಸುತ್ತೇನೆ. ತನಿಖೆ ಮಾಡುವುದಕ್ಕೆ ಏನಿದೆ’ ಎಂದು ಪ್ರಶ್ನಿಸಿದರು.</p>.<p>ಓದಿ...<a href="https://www.prajavani.net/karnataka-news/satish-jarkiholi-withdraws-his-statement-on-hindu-987153.html" target="_blank"> ‘ಹಿಂದೂ’ ಪದ ವಿವಾದ: ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ -ಸತೀಶ ಜಾರಕಿಹೊಳಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>