ಬೆಂಗಳೂರು: ‘ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರ ವಿರುದ್ಧ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಜಾರಿಯ ಪರಿಸ್ಥಿತಿ ಇನ್ನೂ ಬಂದಿಲ್ಲ. ಸದ್ಯಕ್ಕೆ ಎಸ್ಮಾ ಜಾರಿ ಇಲ್ಲ. ಸಾರಿಗೆ ನೌಕರರಿಗೂ ಜನರ ಕಷ್ಟ ಗೊತ್ತಾಗಿದೆ. ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.