ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿರುವುದು, ನಂತರ ದೂರನ್ನು ವಾಪಸ್ ಪಡೆದಿರುವುದು ಸೇರಿದಂತೆ ಎಲ್ಲ ಸಂಗತಿಗಳ ಬಗ್ಗೆಯೂ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಾರೆ. ತನಿಖೆಯ ವರದಿಯನ್ನು ಆಧರಿಸಿ ಅಗತ್ಯ ಕಂಡುಬಂದಲ್ಲಿ ಎಫ್ಐಆರ್ ದಾಖಲಿಸಿ, ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.