ಜಿಲ್ಲಾ ಉಸ್ತುವಾರಿ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ ಮತ್ತು ವಸತಿ ಸಚಿವ ವಿ.ಸೋಮಣ್ಣ ಅವರ ಮಧ್ಯೆಇತ್ತೀಚೆಗೆ ಮಾತಿನ ಜಟಾಪಟಿ ನಡೆದಿತ್ತು. ಬೆಂಗಳೂರಿನ ಹಿರಿಯ ಸಚಿವರಿಗೆ ಉಸ್ತುವಾರಿ ನೀಡಬೇಕು ಎಂದು ಸೋಮಣ್ಣ ಆಗ್ರಹಿಸಿದ್ದರು. ಉಸ್ತುವಾರಿಯ ಮೇಲೆ ಅಶೋಕ, ಸೋಮಣ್ಣ ಸೇರಿದಂತೆ ಹಲವು ಸಚಿವರು ಕಣ್ಣು ಹಾಕಿದ್ದಾರೆ.