ಬೆಂಗಳೂರು:‘ಬೆಂಗಳೂರು ಜಿಲ್ಲಾ ಉಸ್ತುವಾರಿಯ ವಿಚಾರ ಚುನಾವಣೆ ಬಳಿಕ ನಿರ್ಧಾರವಾಗಬಹುದು. ನನ್ನ ಅಭಿಪ್ರಾಯದ ಪ್ರಕಾರ, ಅದು ಮುಖ್ಯಮಂತ್ರಿಯವರ ಬಳಿ ಇದ್ದರೆ ಸೂಕ್ತ’ ಎಂದು ಅಶ್ವತ್ಥನಾರಾಯಣ ಹೇಳಿದರು.
ಜಿಲ್ಲಾ ಉಸ್ತುವಾರಿ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ ಮತ್ತು ವಸತಿ ಸಚಿವ ವಿ.ಸೋಮಣ್ಣ ಅವರ ಮಧ್ಯೆಇತ್ತೀಚೆಗೆ ಮಾತಿನ ಜಟಾಪಟಿ ನಡೆದಿತ್ತು. ಬೆಂಗಳೂರಿನ ಹಿರಿಯ ಸಚಿವರಿಗೆ ಉಸ್ತುವಾರಿ ನೀಡಬೇಕು ಎಂದು ಸೋಮಣ್ಣ ಆಗ್ರಹಿಸಿದ್ದರು. ಉಸ್ತುವಾರಿಯ ಮೇಲೆ ಅಶೋಕ, ಸೋಮಣ್ಣ ಸೇರಿದಂತೆ ಹಲವು ಸಚಿವರು ಕಣ್ಣು ಹಾಕಿದ್ದಾರೆ.
‘ಮುಖ್ಯಮಂತ್ರಿ ಬಳಿ ಉಸ್ತುವಾರಿ ಇದ್ದರೆ ಅನುದಾನ ಬೇಗನೇ ಸಿಗುತ್ತದೆ. ಕಾಮಗಾರಿಗಳಿಗೂ ತ್ವರಿತವಾಗಿ ಅನುಮತಿ ಸಿಗುತ್ತದೆ ಮತ್ತು ಪೂರ್ಣಗೊಳಿಸಲು ಸಾಧ್ಯ. ನಗರದಲ್ಲಿ ಮಳೆ ನಿಂತ ಕೂಡಲೇ ರಸ್ತೆಗಳ ಗುಂಡಿ ಮುಚ್ಚುವುದು, ಡಾಂಬರೀಕರಣ ಸೇರಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.