ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಎಸ್.ಎಲ್. ಭೋಜೇಗೌಡ, ‘ಸಭಾಪತಿ ಸಾಂವಿಧಾನಿಕ ಹುದ್ದೆ. ಆ ಸ್ಥಾನದಲ್ಲಿರುವ ಹೊರಟ್ಟಿ ಅವರ ವಿರುದ್ಧ ಇಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಭಾಪತಿಗೆ ಅಗೌರವವಾಗಿದೆ. ಶಿಷ್ಟಾಚಾರ ಪಾಲನೆಯಾಗಿಲ್ಲ. ಸರ್ಕಾರ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಪಡಿಸಿ ಕೈತೊಳೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಕಾರಣರಾದ ಡಿವೈಎಸ್ಪಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.