ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ (ಕೆಡಿಇಎಂ) ಕೇಂದ್ರ ಉದ್ಘಾಟನೆಗೆ ಅಶ್ವತ್ಥನಾರಾಯಣ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಕೇಂದ್ರ ಉದ್ಘಾಟನೆಗೆ ಮುಂಚೆ ಅವರು ಆರ್ಎಸ್ಎಸ್ ಕಚೇರಿ ಕೇಶವ ಕುಂಜಕ್ಕೆ ತೆರಳಿದ್ದರು. ಅವರ ಜೊತೆ ಹೊರಟ್ಟಿ ಅವರಿದ್ದರು. ಕೆಲಹೊತ್ತು ಆರ್ಎಸ್ಎಸ್ ಪ್ರಮುಖ ಶ್ರೀಧರ್ ನಾಡಿಗೇರ್, ಬಿಜೆಪಿ ಮುಖಂಡರ ಜೊತೆ ಚರ್ಚಿಸಿ ಹೊರಟುಹೋದರು.