ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಬಲ ಎಂದರೆ ಬಿಜೆಪಿ ಜತೆಗೆ ಹೋಗುತ್ತೇವೆ ಎಂದಲ್ಲ: ಎಚ್‌.ಡಿ ರೇವಣ್ಣ

Last Updated 3 ಆಗಸ್ಟ್ 2021, 5:15 IST
ಅಕ್ಷರ ಗಾತ್ರ

ಹಾಸನ: ‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಜೆಡಿಎಸ್‌ ಬೆಂಬಲಕ್ಕೆ ನಿಲ್ಲಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಹೇಳಿದ ಮಾತ್ರಕ್ಕೆಬಿಜೆಪಿ ಜತೆ ಹೋಗುತ್ತೇವೆ ಎಂದು ಅರ್ಥವಲ್ಲ’ ಎಂದು ಶಾಸಕ ಎಚ್‌.ಡಿ.ರೇವಣ್ಣ ಸೋಮವಾರ ಸ್ಪಷ್ಪಪಡಿಸಿದರು.

‘‌ಸರ್ಕಾರ ಬೀಳಿಸುವ ಉದ್ದೇಶ ಇಲ್ಲ. ರಾಜಕೀಯ ದ್ವೇಷ ಮಾಡದೇ ಉತ್ತಮ ಆಡಳಿತ ನೀಡಿದರೆ ಸಹಕಾರ ನೀಡಲಾಗುವುದು. ಬಿ.ಎಸ್‌.ಯಡಿಯೂರಪ್ಪ ಅವರಿಗೂ ಸಹಕಾರನೀಡಿದ್ದರೂ ರಾಜಕೀಯ ದ್ವೇಷ ಮಾಡಿದರು’ ಎಂದರು.

‘ಎಸ್‌.ಆರ್‌‌.ಬೊಮ್ಮಾಯಿ ಅವರೊಂದಿಗೆ ದೇವೇಗೌಡರು ಒಡನಾಟ ಹೊಂದಿದ್ದರು. ಅವರ ಪುತ್ರ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಮನೆಗೆ ಭೇಟಿ ನೀಡಿದ್ದಾಗ ಎರಡು ವರ್ಷ ಉತ್ತಮ ಆಡಳಿತ ನೀಡುವಂತೆ ಗೌಡರು ಸಲಹೆ ನೀಡಿದರು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT