<p><strong>ಬೆಂಗಳೂರು:</strong> ‘ಭೂಚೇತನ ಯೋಜನೆ ಮರುಜಾರಿಗೊಳಿಸುವ ಉದ್ದೇಶ ಇಲ್ಲ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ವಿಧಾನ ಪರಿಷತ್ನಲ್ಲಿ ಶುಕ್ರವಾರ ತಿಳಿಸಿದರು.</p>.<p>ಜೆಡಿಎಸ್ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆ ಕೇಂದ್ರ ಸರ್ಕಾರದ್ದು. 2009ರಿಂದ 2018ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ಒಟ್ಟು 1.04 ಕೋಟಿ ಫಲಾನುಭವಿಗಳು ಯೋಜನೆ ಪ್ರಯೋಜನ ಪಡೆದಿದ್ದಾರೆ. ಆದರೆ, ಯೋಜನೆಯ ಅವಧಿ ಮುಗಿದಿರುವುದರಿಂದ ಮರುಜಾರಿಯ ಚಿಂತನೆ ಇಲ್ಲ’ ಎಂದು ತಿಳಿಸಿದರು.</p>.<p>‘ಆರ್ಐಡಿಎಫ್ ಯೋಜನೆ ಅಡಿ ಯಲ್ಲಿ ರಾಜ್ಯದ ವಿವಿಧೆಡೆ 2,500 ಟನ್ ಸಾಮರ್ಥ್ಯದ 13 ಶೈತ್ಯಾಗಾರಗಳನ್ನು ಸ್ಥಾಪಿಸಲಾಗುವುದು’ ಎಂದು ಸಚಿವರು ಪ್ರಕಟಿಸಿದರು.</p>.<p>ಬೆಳೆ ವಿಮೆ ಕುರಿತು ಬಿಜೆಪಿಯ ಶಶೀಲ್ ಜಿ.ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲೂ ವಿಮಾ ಪ್ರತಿನಿಧಿಗಳಿರುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ 18.50 ಲಕ್ಷ ರೈತರು ಬೆಳೆ ವಿಮೆಗಾಗಿ ನೋಂದಣಿ ಮಾಡಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ವರ್ಷ 7 ಲಕ್ಷ ಹೆಚ್ಚು ಮಂದಿ ನೋಂದಣಿ ಮಾಡಿದ್ದಾರೆ.2022ನೇ ಸಾಲಿನ ಬೆಳೆ ವಿಮೆಯ ಮೊತ್ತವನ್ನು ಡಿಸೆಂಬರ್ ಅಂತ್ಯದ ಒಳಗೆ ಪಾವತಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭೂಚೇತನ ಯೋಜನೆ ಮರುಜಾರಿಗೊಳಿಸುವ ಉದ್ದೇಶ ಇಲ್ಲ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ವಿಧಾನ ಪರಿಷತ್ನಲ್ಲಿ ಶುಕ್ರವಾರ ತಿಳಿಸಿದರು.</p>.<p>ಜೆಡಿಎಸ್ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆ ಕೇಂದ್ರ ಸರ್ಕಾರದ್ದು. 2009ರಿಂದ 2018ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ಒಟ್ಟು 1.04 ಕೋಟಿ ಫಲಾನುಭವಿಗಳು ಯೋಜನೆ ಪ್ರಯೋಜನ ಪಡೆದಿದ್ದಾರೆ. ಆದರೆ, ಯೋಜನೆಯ ಅವಧಿ ಮುಗಿದಿರುವುದರಿಂದ ಮರುಜಾರಿಯ ಚಿಂತನೆ ಇಲ್ಲ’ ಎಂದು ತಿಳಿಸಿದರು.</p>.<p>‘ಆರ್ಐಡಿಎಫ್ ಯೋಜನೆ ಅಡಿ ಯಲ್ಲಿ ರಾಜ್ಯದ ವಿವಿಧೆಡೆ 2,500 ಟನ್ ಸಾಮರ್ಥ್ಯದ 13 ಶೈತ್ಯಾಗಾರಗಳನ್ನು ಸ್ಥಾಪಿಸಲಾಗುವುದು’ ಎಂದು ಸಚಿವರು ಪ್ರಕಟಿಸಿದರು.</p>.<p>ಬೆಳೆ ವಿಮೆ ಕುರಿತು ಬಿಜೆಪಿಯ ಶಶೀಲ್ ಜಿ.ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲೂ ವಿಮಾ ಪ್ರತಿನಿಧಿಗಳಿರುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ 18.50 ಲಕ್ಷ ರೈತರು ಬೆಳೆ ವಿಮೆಗಾಗಿ ನೋಂದಣಿ ಮಾಡಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ವರ್ಷ 7 ಲಕ್ಷ ಹೆಚ್ಚು ಮಂದಿ ನೋಂದಣಿ ಮಾಡಿದ್ದಾರೆ.2022ನೇ ಸಾಲಿನ ಬೆಳೆ ವಿಮೆಯ ಮೊತ್ತವನ್ನು ಡಿಸೆಂಬರ್ ಅಂತ್ಯದ ಒಳಗೆ ಪಾವತಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>