ನವಲಗುಂದ ತಾಲ್ಲೂಕಿನ ಬೆಳವಟಗಿಯಲ್ಲಿ ಭಾನುವಾರ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಿರಿಧಾನ್ಯದ ಆಹಾರವನ್ನು ವಾರಕ್ಕೊಮ್ಮೆ ಮಧ್ಯಾಹ್ನದ ಬಿಸಿಯೂಟಕ್ಕೆ ಮತ್ತು ಹಾಸ್ಟೆಲ್ನಲ್ಲಿ ದಿನಕ್ಕೊಮ್ಮೆ ನೀಡಲಾಗುವುದು. ಮೊದಲ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡಲು ನಿರ್ಧರಿಸಲಾಗಿದೆ. ಇದರಿಂದ ರೈತರಿಗೂ ಉತ್ತೇಜನ ಸಿಕ್ಕಂತಾಗುತ್ತದೆ’ ಎಂದರು.