ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರಕ್ಕೆ ಮುಂದಾದರೆ ಉಗ್ರ ಕ್ರಮ: ಬಿ.ಸಿ.ಪಾಟೀಲ್

ಹಿರಿಯೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್
Last Updated 11 ಸೆಪ್ಟೆಂಬರ್ 2021, 9:50 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ರಾಜ್ಯದಲ್ಲಿ ಯಾರೇ ಮತಾಂತರ ಮಾಡುವುದಕ್ಕೆ ಮುಂದಾದರು ಅಂಥವರ ಮೇಲೆ ರಾಜ್ಯ ಸರ್ಕಾರ ಉಗ್ರ ಕ್ರಮ ಕೈಗೊಳ್ಳಲಿದೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರಿಯೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಭ್ರಷ್ಟನಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿಲ್ವರ್‌ ಬ್ರಿಡ್ಜ್‌ ನಿರ್ಮಾಣದಲ್ಲಿ ₹ 500 ಕೋಟಿ ಪಡೆದಿದ್ದಾರೆ ಎಂಬ ಆರೋಪ ಇತ್ತು. ಆರೋಪ ಮಾಡಿದ ಮಾತ್ರಕ್ಕೆ ಎಲ್ಲವೂ ಸತ್ಯವಾಗುವುದಿಲ್ಲ. ನಾನು ಲಂಚ ಪಡೆದಿದ್ದೇನೆ ಎಂಬುದಾಗಿ ಆರೋಪಿಸುವವರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ತಿರುಗೇಟು ನೀಡಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಜನಪರವಾಗಿದ್ದರೆ ಜನ ತಿರಸ್ಕರಿಸುತ್ತಿರಲಿಲ್ಲ. ಜನವಿರೋಧಿ ಆಗಿರುವುದಕ್ಕೆ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. 2023ರಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಕೃಷಿ ಇಲಾಖೆ ಪಾರದರ್ಶಕವಾಗಿದೆ. ಎಲ್ಲವೂ ಆನ್‌ಲೈನ್ ಮೂಲಕವೇ ನಡೆಯುತ್ತದೆ. ಸರ್ಕಾರವೇ ರೈತರ ಹೊಲ–ಮನೆ ಬಾಗಿಲಿಗೆ ಹೋಗುವ ಕೆಲಸ ಮಾಡುತ್ತಿದೆ’ ಎಂದರು.

‘ನಿಫಾ ವೈರಸ್ ರಾಜ್ಯ ಪ್ರವೇಶಿಸದಂತೆ ಎಲ್ಲಾ ಗಡಿಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಉಳಿದ ರಾಜ್ಯಗಳಿಗಿಂತ ಕರ್ನಾಟಕ ಸುರಕ್ಷಿತವಾಗಿದೆ’ ಎಂದ ಅವರು,‘ಕೇಂದ್ರದ ನೂತನ ಕೃಷಿ ಕಾಯ್ದೆ ರೈತ ವಿರೋಧಿಯಲ್ಲ. ಉತ್ಪನ್ನಗಳ ಮಾರಾಟಕ್ಕೆ ರೈತರಿಗೆ ಸ್ವಾತಂತ್ರ ಕೊಟ್ಟಿದೆ. ಪಂಜಾಬ್‌ ಸೇರಿ ವಿವಿಧ ರಾಜ್ಯಗಳು ಎಂಎಸ್‌ಪಿ ಬೆಂಬಲ ಬೆಲೆಯಿಂದ ಲಾಭ ಪಡೆದಿವೆ. ಪ್ರತಿಭಟನೆ ಎಂಬುದು ವಿರೋಧ ಪಕ್ಷದವರ ದುರುದ್ದೇಶ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT