<p><strong>ಮಡಿಕೇರಿ: </strong>‘ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳೆಂದು ಹೇಳಿದ್ದೇನೆಯೇ ಹೊರತು, ರೈತರೆಲ್ಲರೂ ಹೇಡಿಗಳೆಂದು ಎಲ್ಲಿಯೂ ಹೇಳಿಲ್ಲ. ರೈತರು ಈ ದೇಶಕ್ಕೆ ಅನ್ನ ನೀಡುವ ಅನ್ನದಾತರು’ ಎಂದು ಸಚಿವ ಬಿ.ಸಿ.ಪಾಟೀಲ ಸ್ಪಷ್ಟನೆ ನೀಡಿದ್ದಾರೆ.</p>.<p>‘ರೈತರು ಆತ್ಮಹತ್ಯೆ ಮಾಡಿಕೊಂಡಾಗ ಸಾಂತ್ವನ ಹೇಳುವುದು ದೊಡ್ಡ ವಿಷಯವಲ್ಲ. ಆತ್ಮಹತ್ಯೆಗೆ ಶರಣಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಹೇಡಿಗಳ ಕೆಲಸ. ಪುರಾಣದಲ್ಲೂ ಈ ಕುರಿತು ಉಲ್ಲೇಖವಿದೆ. ನಾನು ಕೃಷಿ ಮಂತ್ರಿಯಾಗಿ, ರೈತರನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವೆ. ಅವರು ಆತ್ಮಹತ್ಯೆಗೆ ಶರಣಾಗಬಾರದೆಂದು ಮನವಿ ಮಾಡಿರುವ ಕಾರಣಕ್ಕೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ಬಂದ ಸಂಕಷ್ಟ ಎದುರಿಸಿ, ಧೈರ್ಯದಿಂದ ಜೀವನ ಮಾಡಿ ಎಂದು ಮನವಿ ಮಾಡುವುದು ತಪ್ಪಾ’ ಎಂದು ಸಚಿವರು ಪ್ರಶ್ನಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/agriculture-minister-bc-patel-on-farmers-who-commit-suicide-784102.html" itemprop="url">ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಬಿ.ಸಿ.ಪಾಟೀಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>‘ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳೆಂದು ಹೇಳಿದ್ದೇನೆಯೇ ಹೊರತು, ರೈತರೆಲ್ಲರೂ ಹೇಡಿಗಳೆಂದು ಎಲ್ಲಿಯೂ ಹೇಳಿಲ್ಲ. ರೈತರು ಈ ದೇಶಕ್ಕೆ ಅನ್ನ ನೀಡುವ ಅನ್ನದಾತರು’ ಎಂದು ಸಚಿವ ಬಿ.ಸಿ.ಪಾಟೀಲ ಸ್ಪಷ್ಟನೆ ನೀಡಿದ್ದಾರೆ.</p>.<p>‘ರೈತರು ಆತ್ಮಹತ್ಯೆ ಮಾಡಿಕೊಂಡಾಗ ಸಾಂತ್ವನ ಹೇಳುವುದು ದೊಡ್ಡ ವಿಷಯವಲ್ಲ. ಆತ್ಮಹತ್ಯೆಗೆ ಶರಣಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಹೇಡಿಗಳ ಕೆಲಸ. ಪುರಾಣದಲ್ಲೂ ಈ ಕುರಿತು ಉಲ್ಲೇಖವಿದೆ. ನಾನು ಕೃಷಿ ಮಂತ್ರಿಯಾಗಿ, ರೈತರನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವೆ. ಅವರು ಆತ್ಮಹತ್ಯೆಗೆ ಶರಣಾಗಬಾರದೆಂದು ಮನವಿ ಮಾಡಿರುವ ಕಾರಣಕ್ಕೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ಬಂದ ಸಂಕಷ್ಟ ಎದುರಿಸಿ, ಧೈರ್ಯದಿಂದ ಜೀವನ ಮಾಡಿ ಎಂದು ಮನವಿ ಮಾಡುವುದು ತಪ್ಪಾ’ ಎಂದು ಸಚಿವರು ಪ್ರಶ್ನಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/agriculture-minister-bc-patel-on-farmers-who-commit-suicide-784102.html" itemprop="url">ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಬಿ.ಸಿ.ಪಾಟೀಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>