‘ರೈತರು ಆತ್ಮಹತ್ಯೆ ಮಾಡಿಕೊಂಡಾಗ ಸಾಂತ್ವನ ಹೇಳುವುದು ದೊಡ್ಡ ವಿಷಯವಲ್ಲ. ಆತ್ಮಹತ್ಯೆಗೆ ಶರಣಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಹೇಡಿಗಳ ಕೆಲಸ. ಪುರಾಣದಲ್ಲೂ ಈ ಕುರಿತು ಉಲ್ಲೇಖವಿದೆ. ನಾನು ಕೃಷಿ ಮಂತ್ರಿಯಾಗಿ, ರೈತರನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವೆ. ಅವರು ಆತ್ಮಹತ್ಯೆಗೆ ಶರಣಾಗಬಾರದೆಂದು ಮನವಿ ಮಾಡಿರುವ ಕಾರಣಕ್ಕೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ಬಂದ ಸಂಕಷ್ಟ ಎದುರಿಸಿ, ಧೈರ್ಯದಿಂದ ಜೀವನ ಮಾಡಿ ಎಂದು ಮನವಿ ಮಾಡುವುದು ತಪ್ಪಾ’ ಎಂದು ಸಚಿವರು ಪ್ರಶ್ನಿಸಿದ್ದಾರೆ.