ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಮಾತನಾಡಿ, ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.7ರಂದು ಬೀದರಿನ ಬಸವಕಲ್ಯಾಣ ಹಾಗೂ ಫೆ.19ರಂದು ದಾವಣಗೆರೆಯ ಚನ್ನಗಿರಿಯಲ್ಲಿ ಹೋರಾಟ ಪೂರ್ವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಶತಮಾನಗಳಿಂದ ಆರ್ಥಿಕ ಮತ್ತು ಸಾಮಾಜಿಕವಾಗಿ
ಬೇಡ ಜಂಗಮರು ಕಡೆಗಣಿಸಲ್ಪಟ್ಟಿದ್ದಾರೆ. ಕೇಂದ್ರ ಸರ್ಕಾರವು
ಭಿಕ್ಷಾ ವೃತ್ತಿ ಕಾಯಕದ ಬೇಡ ಜಂಗಮರನ್ನು ಪರಿಶಿಷ್ಟ ಜಾತಿ ಕಾಯ್ದೆಯಡಿ ಸೇರಿಸಿದೆ. ಆದರೆ, ರಾಜಕೀಯ ಹಿತಾಸಕ್ತಿಯಿಂದ ಬೇಡ ಜಂಗಮ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಲು ವಿಳಂಬ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.