<p><strong>ಬೆಂಗಳೂರು</strong>: ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ಸತ್ಯ ಪ್ರತಿಪಾದನಾ ಸತ್ಯಾಗ್ರಹ’ ನಡೆಯಿತು.</p>.<p>‘ಬೇಡಜಂಗಮ ಸಮುದಾಯದ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ನಮ್ಮ ಕುಲವನ್ನೇ ನಾಶಪಡಿಸಲು ವಿಧಾನಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟುಗಳ ಕಲ್ಯಾಣ ಸಮಿತಿಯಕೆಲವರು ಶಾಸಕರು ಪ್ರಯತ್ನಿಸಿದ್ದಾರೆ. ಹೀಗಾಗಿ, ಸತ್ಯ ಪ್ರತಿಪಾದನೆಗಾಗಿ ಈ ಹೋರಾಟ ಮಾಡಲಾಗುತ್ತಿದೆ’ ಎಂದು ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ತಿಳಿಸಿದರು.</p>.<p>‘ಬೇಡ ಜಂಗಮ ಪ್ರಮಾಣಪತ್ರ ಪಡೆಯುವುದು ಕಾನೂನು ಬದ್ಧ ಹಕ್ಕು. ಆದರೆ, ಕಲ್ಯಾಣ ಸಮಿತಿಗೆ ಅಧಿಕಾರ ಇಲ್ಲದಿದ್ದರೂ ಪ್ರಮಾಣಪತ್ರದ ಬಗ್ಗೆ ನಿರ್ಧಾರಗಳನ್ನು ಕೈಗೊಂಡು ನಮ್ಮ ಸಮುದಾಯವನ್ನು ಸರ್ಕಾರದ ಸೌಲಭ್ಯ<br />ಗಳಿಂದ ವಂಚಿತರನ್ನಾಗಿ ಮಾಡುತ್ತಿದೆ. ಬೇಡ ಜಂಗಮಕ್ಕೆ ಸಂಬಂಧಿಸಿದಂತೆ ಸುಳ್ಳು ಪ್ರಮಾಣಪತ್ರ ಪಡೆಯಲಾಗುತ್ತಿದೆ ಎಂದು ಸಮಿತಿ ಪ್ರತಿಪಾದಿಸುತ್ತಿದೆ. ಪ್ರಮಾಣಪತ್ರ ಪಡೆದವರು ಮತ್ತು ನೀಡಿದವರ ಮೇಲೆ ಮೊಕದ್ದಮೆಗಳನ್ನು ಹಾಕುವ ಮೂಲಕಸರ್ಕಾರದ ಸುತ್ತೋಲೆ ಮತ್ತು ನ್ಯಾಯಾಲಯದ ತೀರ್ಪುಗಳನ್ನು ಉಲ್ಲಂಘಿಸಲಾಗುತ್ತಿದೆ’ ಎಂದು ದೂರಿದರು.</p>.<p>‘ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ನಮ್ಮ ಹಕ್ಕುಗಳನ್ನು ಮೊಟಕುಗೊಳಿಸುವ ಅಧಿಕಾರ ಜನಪ್ರತಿನಿಧಿಗಳಿಗೆ ಇಲ್ಲ. ಜಾತಿ ಪ್ರಮಾಣಪತ್ರಗಳನ್ನು ನಿಯಮಾನುಸಾರ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್ ಅವರ ಮೂಲಕವೇ ವಿಚಾರಣೆಗೆ ಒಳಪಟ್ಟು ಕ್ರಮಬದ್ಧವಾಗಿ ಪಡೆಯಲಾಗುತ್ತಿದೆ. ನಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿಲ್ಲ.’ ಎಂದು ದೂರಿದರು.</p>.<p class="Subhead">‘ಹೋರಾಟಗಾರರಿಗೆ ತಡೆ’: ‘ಬೇಡ ಜಂಗಮ ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಮಂದಿ ಬೆಂಗಳೂರಿಗೆ ಆಗಮಿಸುತ್ತಿದ್ದರು. ಆದರೆ,ತುಮಕೂರಿನ ಶಿರಾ ಸೇರಿದಂತೆ ಎಲ್ಲ ಟೋಲ್ಗಳಲ್ಲಿ ಬಸ್ಗಳನ್ನು ತಡೆಹಿಡಿಯಲಾಯಿತು. ಈ ಮೂಲಕ ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ಸತ್ಯ ಪ್ರತಿಪಾದನಾ ಸತ್ಯಾಗ್ರಹ’ ನಡೆಯಿತು.</p>.<p>‘ಬೇಡಜಂಗಮ ಸಮುದಾಯದ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ನಮ್ಮ ಕುಲವನ್ನೇ ನಾಶಪಡಿಸಲು ವಿಧಾನಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟುಗಳ ಕಲ್ಯಾಣ ಸಮಿತಿಯಕೆಲವರು ಶಾಸಕರು ಪ್ರಯತ್ನಿಸಿದ್ದಾರೆ. ಹೀಗಾಗಿ, ಸತ್ಯ ಪ್ರತಿಪಾದನೆಗಾಗಿ ಈ ಹೋರಾಟ ಮಾಡಲಾಗುತ್ತಿದೆ’ ಎಂದು ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ತಿಳಿಸಿದರು.</p>.<p>‘ಬೇಡ ಜಂಗಮ ಪ್ರಮಾಣಪತ್ರ ಪಡೆಯುವುದು ಕಾನೂನು ಬದ್ಧ ಹಕ್ಕು. ಆದರೆ, ಕಲ್ಯಾಣ ಸಮಿತಿಗೆ ಅಧಿಕಾರ ಇಲ್ಲದಿದ್ದರೂ ಪ್ರಮಾಣಪತ್ರದ ಬಗ್ಗೆ ನಿರ್ಧಾರಗಳನ್ನು ಕೈಗೊಂಡು ನಮ್ಮ ಸಮುದಾಯವನ್ನು ಸರ್ಕಾರದ ಸೌಲಭ್ಯ<br />ಗಳಿಂದ ವಂಚಿತರನ್ನಾಗಿ ಮಾಡುತ್ತಿದೆ. ಬೇಡ ಜಂಗಮಕ್ಕೆ ಸಂಬಂಧಿಸಿದಂತೆ ಸುಳ್ಳು ಪ್ರಮಾಣಪತ್ರ ಪಡೆಯಲಾಗುತ್ತಿದೆ ಎಂದು ಸಮಿತಿ ಪ್ರತಿಪಾದಿಸುತ್ತಿದೆ. ಪ್ರಮಾಣಪತ್ರ ಪಡೆದವರು ಮತ್ತು ನೀಡಿದವರ ಮೇಲೆ ಮೊಕದ್ದಮೆಗಳನ್ನು ಹಾಕುವ ಮೂಲಕಸರ್ಕಾರದ ಸುತ್ತೋಲೆ ಮತ್ತು ನ್ಯಾಯಾಲಯದ ತೀರ್ಪುಗಳನ್ನು ಉಲ್ಲಂಘಿಸಲಾಗುತ್ತಿದೆ’ ಎಂದು ದೂರಿದರು.</p>.<p>‘ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ನಮ್ಮ ಹಕ್ಕುಗಳನ್ನು ಮೊಟಕುಗೊಳಿಸುವ ಅಧಿಕಾರ ಜನಪ್ರತಿನಿಧಿಗಳಿಗೆ ಇಲ್ಲ. ಜಾತಿ ಪ್ರಮಾಣಪತ್ರಗಳನ್ನು ನಿಯಮಾನುಸಾರ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್ ಅವರ ಮೂಲಕವೇ ವಿಚಾರಣೆಗೆ ಒಳಪಟ್ಟು ಕ್ರಮಬದ್ಧವಾಗಿ ಪಡೆಯಲಾಗುತ್ತಿದೆ. ನಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿಲ್ಲ.’ ಎಂದು ದೂರಿದರು.</p>.<p class="Subhead">‘ಹೋರಾಟಗಾರರಿಗೆ ತಡೆ’: ‘ಬೇಡ ಜಂಗಮ ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಮಂದಿ ಬೆಂಗಳೂರಿಗೆ ಆಗಮಿಸುತ್ತಿದ್ದರು. ಆದರೆ,ತುಮಕೂರಿನ ಶಿರಾ ಸೇರಿದಂತೆ ಎಲ್ಲ ಟೋಲ್ಗಳಲ್ಲಿ ಬಸ್ಗಳನ್ನು ತಡೆಹಿಡಿಯಲಾಯಿತು. ಈ ಮೂಲಕ ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>