ವಿಧಾನ ಪರಿಷತ್ನಲ್ಲಿ ಶುಕ್ರವಾರ ಜೆಡಿಎಸ್ನ ಗೋವಿಂದ ರಾಜು ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರು ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಸಿದರೆ, ಇನ್ನು ಕೆಲವರು ಬೇರೆಯವರ ಮಕ್ಕಳನ್ನು ಬಳಕೆ ಮಾಡುವುದು ಕಂಡುಬಂದಿದೆ. ತುಮಕೂರಿನಲ್ಲಿ ಆರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಂಗಳೂರಿನ ವಿವಿಧೆಡೆ ಆಗಸ್ಟ್ ತಿಂಗಳಲ್ಲಿ 22 ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಲಾಗಿದೆ’ ಎಂದರು.