‘ಸಾರ್ವಜನಿಕರು ತಮ್ಮ ಸಮಸ್ಯೆಯ ಕುರಿತು ವ್ಯವಹರಿಸಲು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ತಾರತಮ್ಯ ಮಾಡದೆ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು’ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿ. ಈ ವಿಚಾರದಲ್ಲಿ ತಮ್ಮ ಅಧೀನದಲ್ಲಿರುವ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸೂಚನೆ ನೀಡುವಂತೆ ವಿವಿಧ ಇಲಾಖೆಗಳು, ನಿಗಮ, ಮಂಡಳಿಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.