<p><strong>ನಿಪ್ಪಾಣಿ: </strong>‘ಗಡಿ ವಿಚಾರವಾಗಿ ನಡೆದ ಬೆಳವಣಿಗೆಗಳ ಕಾರಣ ನಿಷೇಧಾಜ್ಞೆ ಜಾರಿ ಮಾಡುವಂಥ ಅವಶ್ಯಕತೆ ಇನ್ನೂ ಬಿದ್ದಿಲ್ಲ. ನ.30ರಂದು ಸುಪ್ರೀಂಕೋರ್ಟ್ನ ತೀರ್ಪು ಏನು ಬರುತ್ತದೋ ಅದನ್ನು ನೋಡಿಕೊಂಡು ನಿರ್ಧಾರ ಮಾಡಲಾಗುವುದು’ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ನಡೆದ ಅಂತರರಾಜ್ಯ ಗಡಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಯಾರಿಗಾದರೂ ಸಮಸ್ಯೆಗಳಿದ್ದಲ್ಲಿ ಪೊಲೀಸರೊಂದಿಗೆ ಚರ್ಚಿಸಿ. ಕಾನೂನು ಯಾರೂ ಮೀರಬೇಡಿ’ ಎಂದರು.</p>.<p>‘ಎರಡೂ ರಾಜ್ಯಗಳಲ್ಲಿ ಬಸ್ಗಳ ಮೇಲೆ ಮಸಿ ಬಳಸುವುದು, ಕಲ್ಲು ತೂರುವುದು ನಡೆದಿದೆ. ಸಾಂಗ್ಲಿಯಲ್ಲಿ ರಾಜ್ಯದ ಬಸ್ಸುಗಳಿಗೆ ಕಲ್ಲು ತೂರಿದ ಪ್ರಸಂಗ ಸೇರಿದಂತೆ ಮೂರು ಕಡೆ ಪ್ರಕರಣ ದಾಖಲಾಗಿವೆ. ಮಹಾರಾಷ್ಟ್ರ ಪೊಲೀಸರಿಗೆ ಮನವರಿಕೆ ಮಾಡಿದ್ದು ಭದ್ರತೆ ನೀಡುವಂತೆ ಹೇಳಲಾಗಿದೆ’ ಎಂದರು.</p>.<p>ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಡಿಸಿಪಿಗಳಾದ ರವೀಂದ್ರ ಗದಾಡಿ, ಪಿ.ಸ್ನೇಹಾ, ಡಿವೈಎಸ್ಪಿಗಳು, ಸಿಪಿಐಗಳು, ಪಿಎಸ್ಐಗಳು ಇದ್ದರು.</p>.<p>ಮಹಾರಾಷ್ಟ್ರದ ಸಾವಂತವಾಡಿ ವಿಭಾಗದಿಂದ ಡಿವೈಎಸ್ಪಿ ಡಾ.ರೋಹಿನಿ ಸಾಳುಂಖೆ, ಸಿಪಿಐ ಭೋಸಲೆ, ಮೊದಲಾದ ಅಧಿಕಾರಿಗಳು ಇದ್ದರು.</p>.<p>ನಂತರ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಕೊಗನೋಳಿ ಚೆಕ್ ಪೋಸ್ಟ್ಗೆ ತೆರಳಿ ಪರಿಶೀಲನೆ ನಡೆಸಿದರು.ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ: </strong>‘ಗಡಿ ವಿಚಾರವಾಗಿ ನಡೆದ ಬೆಳವಣಿಗೆಗಳ ಕಾರಣ ನಿಷೇಧಾಜ್ಞೆ ಜಾರಿ ಮಾಡುವಂಥ ಅವಶ್ಯಕತೆ ಇನ್ನೂ ಬಿದ್ದಿಲ್ಲ. ನ.30ರಂದು ಸುಪ್ರೀಂಕೋರ್ಟ್ನ ತೀರ್ಪು ಏನು ಬರುತ್ತದೋ ಅದನ್ನು ನೋಡಿಕೊಂಡು ನಿರ್ಧಾರ ಮಾಡಲಾಗುವುದು’ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ನಡೆದ ಅಂತರರಾಜ್ಯ ಗಡಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಯಾರಿಗಾದರೂ ಸಮಸ್ಯೆಗಳಿದ್ದಲ್ಲಿ ಪೊಲೀಸರೊಂದಿಗೆ ಚರ್ಚಿಸಿ. ಕಾನೂನು ಯಾರೂ ಮೀರಬೇಡಿ’ ಎಂದರು.</p>.<p>‘ಎರಡೂ ರಾಜ್ಯಗಳಲ್ಲಿ ಬಸ್ಗಳ ಮೇಲೆ ಮಸಿ ಬಳಸುವುದು, ಕಲ್ಲು ತೂರುವುದು ನಡೆದಿದೆ. ಸಾಂಗ್ಲಿಯಲ್ಲಿ ರಾಜ್ಯದ ಬಸ್ಸುಗಳಿಗೆ ಕಲ್ಲು ತೂರಿದ ಪ್ರಸಂಗ ಸೇರಿದಂತೆ ಮೂರು ಕಡೆ ಪ್ರಕರಣ ದಾಖಲಾಗಿವೆ. ಮಹಾರಾಷ್ಟ್ರ ಪೊಲೀಸರಿಗೆ ಮನವರಿಕೆ ಮಾಡಿದ್ದು ಭದ್ರತೆ ನೀಡುವಂತೆ ಹೇಳಲಾಗಿದೆ’ ಎಂದರು.</p>.<p>ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಡಿಸಿಪಿಗಳಾದ ರವೀಂದ್ರ ಗದಾಡಿ, ಪಿ.ಸ್ನೇಹಾ, ಡಿವೈಎಸ್ಪಿಗಳು, ಸಿಪಿಐಗಳು, ಪಿಎಸ್ಐಗಳು ಇದ್ದರು.</p>.<p>ಮಹಾರಾಷ್ಟ್ರದ ಸಾವಂತವಾಡಿ ವಿಭಾಗದಿಂದ ಡಿವೈಎಸ್ಪಿ ಡಾ.ರೋಹಿನಿ ಸಾಳುಂಖೆ, ಸಿಪಿಐ ಭೋಸಲೆ, ಮೊದಲಾದ ಅಧಿಕಾರಿಗಳು ಇದ್ದರು.</p>.<p>ನಂತರ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಕೊಗನೋಳಿ ಚೆಕ್ ಪೋಸ್ಟ್ಗೆ ತೆರಳಿ ಪರಿಶೀಲನೆ ನಡೆಸಿದರು.ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>