ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಈಶ್ವರಪ್ಪ– ರಮೇಶ ಚರ್ಚೆ

Last Updated 19 ಡಿಸೆಂಬರ್ 2022, 21:30 IST
ಅಕ್ಷರ ಗಾತ್ರ

ಬೆಳಗಾವಿ: ಬಿಜೆಪಿ ಶಾಸಕರಾದ ಕೆ.ಎಸ್‌. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸೋಮವಾರ ಸಂಜೆ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಚರ್ಚಿಸಿದರು.

ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದೆ ಅತೃಪ್ತಗೊಂಡಿರುವ ಈ ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಂತರ, ಇಬ್ಬರು ಒಟ್ಟಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಇಬ್ಬರು ಸೋಮವಾರದ ಕಲಾಪದಲ್ಲಿ ಭಾಗಿಯಾಗಿರಲಿಲ್ಲ.

‘ಬೆಳಗಾವಿಗೆ ಬರುತ್ತೇನೆ. ಆದರೆ, ಕಲಾಪದಲ್ಲಿ ಭಾಗವಹಿಸುವುದಿಲ್ಲ’ ಎಂದು ಈಶ್ವರಪ್ಪ ಅವರು ಬಾಗಲಕೋಟೆಯಲ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT