ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಒಂದು ದಿನ ಮೊದಲೇ ವಿಧಾನಮಂಡಲ ಕಲಾಪ ಅಂತ್ಯ

Last Updated 28 ಡಿಸೆಂಬರ್ 2022, 21:02 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ನಿಗದಿತ ದಿನಾಂಕಕ್ಕಿಂತ ಒಂದು ದಿನ ಮೊದಲೇ ಮುಕ್ತಾಯ
ವಾಗಲಿದೆ.

ವಿಧಾನಸಭೆಯಲ್ಲಿ ಈ ವಿಷಯ ತಿಳಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಕಲಾಪವು ಇದೇ 30ರವರೆಗೆ ನಡೆಯಬೇಕಿತ್ತು. ಆದರೆ, ಸದನದ ಅನೇಕ ಸದಸ್ಯರು ಅನ್ಯ ಕಾರ್ಯನಿಮಿತ್ತ ಅಂದು ಇರಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಗುರುವಾರ (ಡಿ.29) ಸಂಜೆಯೇ ಕಲಾಪ ಮುಕ್ತಾಯಗೊಳಿಸುವ ಬಗ್ಗೆ ಹಿರಿಯ ಸದಸ್ಯರ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದರು.

ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಹೀಗಾಗಿ, ಶುಕ್ರವಾರ ಮಧ್ಯಾಹ್ನದವರೆಗೆ ಸುಮಾರು 3 ಗಂಟೆ ಕಲಾಪ ನಡೆಯುತ್ತಿತ್ತು. ಗುರುವಾರವೇ ಸಮಯ ಹೊಂದಿಸಿಕೊಂಡು, ಭೋಜನ ವಿರಾಮವೂ ಇಲ್ಲದಂತೆ ನಡೆಸಿ. ಕೊನೆಯ ದಿನದ ಮೂರು ಗಂಟೆಯ ಕಲಾಪ ನಷ್ಟವಾಗದಂತೆ ನೋಡಿಕೊಳ್ಳಿ’ ಎಂದು ಸಲಹೆ ನೀಡಿದರು.

ಅದನ್ನು ಕಾಗೇರಿ ಒಪ್ಪಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT