ವಿಧಾನಸಭೆಯಲ್ಲಿ ಈ ವಿಷಯ ತಿಳಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಕಲಾಪವು ಇದೇ 30ರವರೆಗೆ ನಡೆಯಬೇಕಿತ್ತು. ಆದರೆ, ಸದನದ ಅನೇಕ ಸದಸ್ಯರು ಅನ್ಯ ಕಾರ್ಯನಿಮಿತ್ತ ಅಂದು ಇರಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಗುರುವಾರ (ಡಿ.29) ಸಂಜೆಯೇ ಕಲಾಪ ಮುಕ್ತಾಯಗೊಳಿಸುವ ಬಗ್ಗೆ ಹಿರಿಯ ಸದಸ್ಯರ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದರು.