ಅಧಿವೇಶನಕ್ಕಾಗಿ ಶಾಸಕರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳೂ ಸೇರಿದಂತೆ ಬೃಹತ್ ಸಂಖ್ಯೆಯ ಜನರು ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ಬೆಳಗಾವಿಗೆ ಜನರು ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಸುವುದು ಮತ್ತು ಸಮಾವೇಶಗೊಳ್ಳುವುದು ಮತ್ತೊಂದು ಬೃಹತ್ ಕೋವಿಡ್ ಸೋಂಕಿನ ವಲಯ ಸೃಷ್ಟಿಗೆ ಕಾರಣವಾಗಬಹುದು ಎಂಬ ಆತಂಕ ಸರ್ಕಾರದೊಳಗೇ ವ್ಯಕ್ತವಾಗುತ್ತಿದೆ.