<p>ಬೆಳಗಾವಿ: ರಾಜ್ಯದಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಓದುತ್ತಿರುವ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಮುಂದುವರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಶೂನ್ಯವೇಳೆಯಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಈ ವಿಷಯ ಕುರಿತು ಪ್ರಸ್ತಾಪಿಸಿದರು.</p>.<p>ಕೇಂದ್ರ ಸರ್ಕಾರವು 1–8ನೇ ತರಗತಿಯವರೆಗಿನ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರವೇ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವೇತನವನ್ನು ನೀಡುತ್ತಿದ್ದು, ಅದನ್ನು ಮುಂದುವರಿಸಲಾಗುತ್ತದೆ ಎಂದರು.</p>.<p>ಹಿಂದುಳಿ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನಕ್ಕೆ ಹಣಕಾಸಿನ ಕಾರಣಕ್ಕೆ ತಡೆಯಾಗಿತ್ತು. ಗೊಂದಲ ಬಗೆಹರಿಸಿದ್ದು, ಅದನ್ನು ಮುಂದುವರಿಸುತ್ತೇವೆ ಎಂದು ವಿವರಿಸಿದರು.</p>.<p>ಗುಂಡಿಗೆ ವೆಚ್ಚ– ‘ಪ್ರಜಾವಾಣಿ’ ವರದಿ ಪ್ರಸ್ತಾಪ:ಬೆಂಗಳೂರಿನ ರಸ್ತೆಗಳಿಗೆ ₹25 ಸಾವಿರ ಕೋಟಿ ವೆಚ್ಚ ಮಾಡಲಾಗಿದ್ದರೂ ಗುಂಡಿ ಮುಕ್ತವಾಗಿಸಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಹೇಳಿದರು.</p>.<p>‘₹25 ಸಾವಿರ ಕೋಟಿ ರಸ್ತೆ–ಗುಂಡಿ ಪಾಲು’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ‘ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ ಪ್ರಸ್ತಾಪಿಸಿದ ಅವರು, ಏಳು ವರ್ಷದಲ್ಲಿ ಇಷ್ಟೆಲ್ಲ ವೆಚ್ಚ ಮಾಡಿದ್ದರೂ ಗುಂಡಿ ಸಮಸ್ಯೆ ಪರಿಹಾರವಾಗಿಲ್ಲ’ ಎಂದು ದೂರಿದರು. ಶುಕ್ರವಾರ ಉತ್ತರ ಕೊಡಿಸುವುದಾಗಿ ಸಭಾಪತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ರಾಜ್ಯದಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಓದುತ್ತಿರುವ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರ್ಗಗಳ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಮುಂದುವರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಶೂನ್ಯವೇಳೆಯಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಈ ವಿಷಯ ಕುರಿತು ಪ್ರಸ್ತಾಪಿಸಿದರು.</p>.<p>ಕೇಂದ್ರ ಸರ್ಕಾರವು 1–8ನೇ ತರಗತಿಯವರೆಗಿನ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರವೇ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವೇತನವನ್ನು ನೀಡುತ್ತಿದ್ದು, ಅದನ್ನು ಮುಂದುವರಿಸಲಾಗುತ್ತದೆ ಎಂದರು.</p>.<p>ಹಿಂದುಳಿ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನಕ್ಕೆ ಹಣಕಾಸಿನ ಕಾರಣಕ್ಕೆ ತಡೆಯಾಗಿತ್ತು. ಗೊಂದಲ ಬಗೆಹರಿಸಿದ್ದು, ಅದನ್ನು ಮುಂದುವರಿಸುತ್ತೇವೆ ಎಂದು ವಿವರಿಸಿದರು.</p>.<p>ಗುಂಡಿಗೆ ವೆಚ್ಚ– ‘ಪ್ರಜಾವಾಣಿ’ ವರದಿ ಪ್ರಸ್ತಾಪ:ಬೆಂಗಳೂರಿನ ರಸ್ತೆಗಳಿಗೆ ₹25 ಸಾವಿರ ಕೋಟಿ ವೆಚ್ಚ ಮಾಡಲಾಗಿದ್ದರೂ ಗುಂಡಿ ಮುಕ್ತವಾಗಿಸಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಹೇಳಿದರು.</p>.<p>‘₹25 ಸಾವಿರ ಕೋಟಿ ರಸ್ತೆ–ಗುಂಡಿ ಪಾಲು’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ‘ಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ ಪ್ರಸ್ತಾಪಿಸಿದ ಅವರು, ಏಳು ವರ್ಷದಲ್ಲಿ ಇಷ್ಟೆಲ್ಲ ವೆಚ್ಚ ಮಾಡಿದ್ದರೂ ಗುಂಡಿ ಸಮಸ್ಯೆ ಪರಿಹಾರವಾಗಿಲ್ಲ’ ಎಂದು ದೂರಿದರು. ಶುಕ್ರವಾರ ಉತ್ತರ ಕೊಡಿಸುವುದಾಗಿ ಸಭಾಪತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>