‘ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ. 24 ರವರೆಗೆ ನಡೆಯಲಿದೆ. ಮಾಧ್ಯಮ ಪ್ರತಿನಿಧಿಗಳಿಗೆ ಕಲಾಪಗಳ ವರದಿಗಾರಿಕೆಗಾಗಿ ಪ್ರವೇಶಪತ್ರಗಳನ್ನು ನೀಡಲಾಗಿದೆ. ಅದೇ ರೀತಿ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳ ಬೈಟ್ ಪಡೆಯಲು ಅನುಕೂಲವಾಗುವಂತೆ ಪಶ್ಚಿಮ ದ್ವಾರದ ಬಳಿ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಆಧರೂ ಕೆಲವರು ಸುವರ್ಣ ವಿಧಾನಸೌಧದ ಎಲ್ಲ ಮಹಡಿಗಳ ಕಾರಿಡಾರ್ನಲ್ಲಿ ಚಿತ್ರೀಕರಣ ಹಾಗೂ ಜನಪ್ರತಿನಿಧಿಗಳ ಸಂದರ್ಶನ ಮಾಡುತ್ತಿರುವುದು ಕಂಡುಬಂದಿದೆ.ಮಾದ್ಯಮ ಪ್ರತಿನಿಧಿಗಳು ಭದ್ರತೆಯ ದೃಷ್ಟಿಯಿಂದ ನಿಗದಿತ ಸ್ಥಳಗಳಲ್ಲಿ ಮಾತ್ರ ಗಣ್ಯರ ಬೈಟ್ ಪಡೆದುಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಕೋರಲಾಗಿದೆ’.