<p><strong>ಬಳ್ಳಾರಿ:</strong> ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಲಭಿಸಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಟಿಕೆಟ್ ದೊರಕದೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಐವರು ಕೂಡ ಪಾಲಿಕೆಯ ಮೆಟ್ಟಿಲು ಹತ್ತಿದ್ದಾರೆ.</p>.<p>39 ವಾರ್ಡ್ಗಳ ಪೈಕಿ 21 ವಾರ್ಡ್ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. 13 ಸ್ಥಾನಗಳನ್ನು ಗಳಿಸಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನಕ್ಕಷ್ಟೇ ತೃಪ್ತಿಪಟ್ಟುಕೊಳ್ಳುವಂತಾಗಿದೆ.</p>.<p>ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಶುಕ್ರವಾರ ಮಧ್ಯಾಹ್ನದವರೆಗೂ ನಡೆದ ಮತ ಎಣಿಕೆಯ ಉದ್ದಕ್ಕೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿ ಗಮನ ಸೆಳೆದರು.</p>.<p>ಸಚಿವ ಬಿ.ಶ್ರೀರಾಮುಲು, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ನಿರಂತರ ಭಾರೀ ಪ್ರಚಾರದ ಬಳಿಕವೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಗಿಲ್ಲ.</p>.<p><strong>ಶಾಸಕ ಪುತ್ರನ ಸೋಲು:</strong> ವಿಪರ್ಯಾಸವೆಂದರೆ 18ನೇ ವಾರ್ಡ್ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶಾಸಕ ಜಿ.ಸೋಮಶೇಖರ ರೆಡ್ಡಿ ಪುತ್ರ ಜಿ.ಶ್ರವಣಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ,ನಂದೀಶ್ ಎದುರು ಕೇವಲ 133 ಮತಗಳ ಅಂತರದಿಂದ ಸೋತರು. ಶಾಸಕ ರೆಡ್ಡಿ ಈ ಚುನಾವಣೆಯನ್ನು ತಮ್ಮ ಪ್ರತಿಷ್ಠೆಯ ಕಣವನ್ನಾಗಿ ಪರಿಗಣಿಸಿ ಹಗಲು–ರಾತ್ರಿ ನಿರಂತರ ಪ್ರಚಾರ ನಡೆಸಿದ್ದರು.</p>.<p>ಕಾಂಗ್ರೆಸ್ ಟಿಕೆಟ್ ದೊರಕದೆ ಪಕ್ಷೇತರರಾಗಿ ಸ್ಪರ್ಧಿಸಿದ್ದ 3ನೇ ವಾರ್ಡಿನ ಎಂ.ಪ್ರಭಂಜನ್ಕುಮಾರ್, 15ನೇ ವಾರ್ಡಿನ ನೂರ್ ಮಹ್ಮದ್, 17ನೇ ವಾರ್ಡಿನ ಕವಿತಾ ಕೆ.ಹೊನ್ನಪ್ಪ, 32ನೇ ವಾರ್ಡಿನ ಮಂಜುಳಾ, 35ನೇ ವಾರ್ಡಿನ ವಿ.ಶ್ರೀನಿವಾಸಲು ಅತ್ಯಧಿಕ ಮತಗಳಿಂದ ಗೆದ್ದಿದ್ದಾರೆ. ಈ ವಾರ್ಡ್ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತೀವ್ರ ಹಿನ್ನಡೆ ಕಂಡಿದ್ದಾರೆ.</p>.<p>32ನೇ ವಾರ್ಡಿನಲ್ಲಿಕಾಂಗ್ರೆಸ್ ಅಭ್ಯರ್ಥಿ ಚಾಮುಂಡೇಶ್ವರಿ ಕೇವಲ 338 ಮತ ಗಳಿಸಿ ಹೀನಾಯ ಸೋಲು ಕಂಡರು. ವಾರ್ಡ್ 37ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲನ್ ಬಿ ಕೇವಲ 13 ಮತಗಳ ಅಂತರದಲ್ಲಿ ಗೆಲುವು ಕಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಲಭಿಸಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಟಿಕೆಟ್ ದೊರಕದೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಐವರು ಕೂಡ ಪಾಲಿಕೆಯ ಮೆಟ್ಟಿಲು ಹತ್ತಿದ್ದಾರೆ.</p>.<p>39 ವಾರ್ಡ್ಗಳ ಪೈಕಿ 21 ವಾರ್ಡ್ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. 13 ಸ್ಥಾನಗಳನ್ನು ಗಳಿಸಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನಕ್ಕಷ್ಟೇ ತೃಪ್ತಿಪಟ್ಟುಕೊಳ್ಳುವಂತಾಗಿದೆ.</p>.<p>ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಶುಕ್ರವಾರ ಮಧ್ಯಾಹ್ನದವರೆಗೂ ನಡೆದ ಮತ ಎಣಿಕೆಯ ಉದ್ದಕ್ಕೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿ ಗಮನ ಸೆಳೆದರು.</p>.<p>ಸಚಿವ ಬಿ.ಶ್ರೀರಾಮುಲು, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ನಿರಂತರ ಭಾರೀ ಪ್ರಚಾರದ ಬಳಿಕವೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಗಿಲ್ಲ.</p>.<p><strong>ಶಾಸಕ ಪುತ್ರನ ಸೋಲು:</strong> ವಿಪರ್ಯಾಸವೆಂದರೆ 18ನೇ ವಾರ್ಡ್ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶಾಸಕ ಜಿ.ಸೋಮಶೇಖರ ರೆಡ್ಡಿ ಪುತ್ರ ಜಿ.ಶ್ರವಣಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ,ನಂದೀಶ್ ಎದುರು ಕೇವಲ 133 ಮತಗಳ ಅಂತರದಿಂದ ಸೋತರು. ಶಾಸಕ ರೆಡ್ಡಿ ಈ ಚುನಾವಣೆಯನ್ನು ತಮ್ಮ ಪ್ರತಿಷ್ಠೆಯ ಕಣವನ್ನಾಗಿ ಪರಿಗಣಿಸಿ ಹಗಲು–ರಾತ್ರಿ ನಿರಂತರ ಪ್ರಚಾರ ನಡೆಸಿದ್ದರು.</p>.<p>ಕಾಂಗ್ರೆಸ್ ಟಿಕೆಟ್ ದೊರಕದೆ ಪಕ್ಷೇತರರಾಗಿ ಸ್ಪರ್ಧಿಸಿದ್ದ 3ನೇ ವಾರ್ಡಿನ ಎಂ.ಪ್ರಭಂಜನ್ಕುಮಾರ್, 15ನೇ ವಾರ್ಡಿನ ನೂರ್ ಮಹ್ಮದ್, 17ನೇ ವಾರ್ಡಿನ ಕವಿತಾ ಕೆ.ಹೊನ್ನಪ್ಪ, 32ನೇ ವಾರ್ಡಿನ ಮಂಜುಳಾ, 35ನೇ ವಾರ್ಡಿನ ವಿ.ಶ್ರೀನಿವಾಸಲು ಅತ್ಯಧಿಕ ಮತಗಳಿಂದ ಗೆದ್ದಿದ್ದಾರೆ. ಈ ವಾರ್ಡ್ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ತೀವ್ರ ಹಿನ್ನಡೆ ಕಂಡಿದ್ದಾರೆ.</p>.<p>32ನೇ ವಾರ್ಡಿನಲ್ಲಿಕಾಂಗ್ರೆಸ್ ಅಭ್ಯರ್ಥಿ ಚಾಮುಂಡೇಶ್ವರಿ ಕೇವಲ 338 ಮತ ಗಳಿಸಿ ಹೀನಾಯ ಸೋಲು ಕಂಡರು. ವಾರ್ಡ್ 37ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲನ್ ಬಿ ಕೇವಲ 13 ಮತಗಳ ಅಂತರದಲ್ಲಿ ಗೆಲುವು ಕಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>