‘ಯಾವುದೇ ಶಾಸಕರು ಹೇಳಿದಾಕ್ಷಣ ಆಸ್ಪತ್ರೆಗೆ ನಿರ್ದೇಶಕರನ್ನು ನೇಮಿಸಲು ಸಾಧ್ಯವಿಲ್ಲ. ನಿರ್ದೇಶಕ ಸ್ಥಾನಕ್ಕೆ ನೇಮಿಸಲು ಕೆಲವು ನಿಯಮಗಳಿರುತ್ತವೆ. ಅರ್ಹರಾದವರನ್ನು ಮಾತ್ರ ನೇಮಿಸಲಾಗುತ್ತದೆ. ಕರುಣಾಕರ ರೆಡ್ಡಿ, ಸಚಿವ ಬಿ. ಶ್ರೀರಾಮುಲು, ಸಚಿವ ಆನಂದ್ ಸಿಂಗ್ ಎಲ್ಲರೂ ಬಳ್ಳಾರಿಯಲ್ಲಿದ್ದಾರೆ. ಈ ವಿಷಯದಲ್ಲಿ ರಾಜಕಾರಣ ಮಾಡುವವರ ಘನತೆಯೇ ಕಡಿಮೆಯಾಗಲಿದೆ’ ಎಂದರು.